ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರಿಗೆ ಶಿವಮೊಗ್ಗದ ಜೊತೆಗೆ ಉತ್ತಮ ನಂಟಿತ್ತು. ಪಕ್ಕದ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದರಿಂದ, ಶಿವಮೊಗ್ಗದ ಜೊತೆ, ಶಿವಮೊಗ್ಗದವರ ಜೊತೆಗೆ ಒಳ್ಳೆಯ ಬಾಂಧವ್ಯ ಇತ್ತು.
ಶಿವಮೊಗ್ಗದಲ್ಲೂ ಅಭಿಮಾನಿಗಳು, ಹಿತೈಷಿಗಳು
ಧರ್ಮೇಗೌಡ ಅವರಿಗೆ ಶಿವಮೊಗ್ಗದಲ್ಲಿ ಹಿತೈಷಿಗಳಿದ್ದಾರೆ, ಅಭಿಮಾನಿಗಳು ಇದ್ದಾರೆ. ಇವತ್ತು ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಹಿತೈಷಿಗಳು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದಾರೆ.
ಒಂದು ತಿಂಗಳ ಹಿಂದೆ ಶಿವಮೊಗ್ಗದಲ್ಲಿದ್ದರು
ಸರಿಯಾಗಿ ಒಂದು ತಿಂಗಳ ಹಿಂದೆ ಎಸ್.ಎಲ್.ಧರ್ಮೇಗೌಡ ಅವರು ಶಿವಮೊಗ್ಗದಲ್ಲಿದ್ದರು. ಸಹ್ಯಾದ್ರಿ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನವೆಂಬರ್ 29ರಂದು ಆ ಕಾರ್ಯಕ್ರಮ ನಡೆದಿತ್ತು. ದುರಂತವೆಂದರೆ ಡಿಸೆಂಬರ್ 29ರಂದು ಶಿವಮೊಗ್ಗದಲ್ಲಿ ಧರ್ಮೇಗೌಡ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಏನೆಲ್ಲ ಮಾತಾಡಿದ್ದರು ಧರ್ಮೇಗೌಡರು?
ಸಹ್ಯಾದ್ರಿ ಕಾಲೇಜಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಸ್.ಎಲ್.ಧರ್ಮೇಗೌಡ ಅವರು, ಸಹ್ಯಾದ್ರಿ ಕಾಲೇಜು ಇತಿಹಾಸವನ್ನು ಸ್ಮರಿಸಿದ್ದರು. ಮಲೆನಾಡು ಭಾಗದಲ್ಲಿ ಶೈಕ್ಷಣಿಕ ಬೆಳವಣಿಗೆ ಕುರಿತು ಮಾತನಾಡಿದ್ದರು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆ, ಪರಿವರ್ತನೆ ಕುರಿತು ಚರ್ಚಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]