ಒಕ್ಕಲಿಗರ ಸಂಘದ ಚುನಾವಣೆ, ಧರ್ಮೇಶ್’ಗೆ ಭರ್ಜರಿ ಗೆಲುವು, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತ ಬಂದಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಡಿಸೆಂಬರ್ 2021

ತೀವ್ರ ಕುತೂಹಲ ಕೆರಳಿಸಿದ್ದ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ತೀರ್ಥಹಳ್ಳಿಯ ಧರ್ಮೇಶ್ ಸಿರಿಬೈಲು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಭದ್ರಾವತಿಯ ಕುಮಾರ್ ಅವರಿಗಿಂತಲೂ ಎರಡು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಧರ್ಮೇಶ್ ಅವರು 5808 ಮತಗಳನ್ನು ಪಡೆದಿದ್ದಾರೆ. ಕುಮಾರ್ ಅವರು 3486 ಮತಗಳನ್ನು ಗಳಿಸಿದ್ದಾರೆ. ಬಹುಮತ ಪಡೆದ ಧರ್ಮೇಶ್ ಅವರನ್ನು ಜಯಶಾಲಿ ಎಂದು ಘೋಷಿಸಲಾಯಿತು.

ಬೆಂಬಲಿಗರಿಂದ ಸಂಭ್ರಮಾಚಾರಣೆ

ಧರ್ಮೇಶ್ ಸಿರಿಬೈಲ್ ಅವರು ಗೆಲುವು ದಾಖಲಿಸುತ್ತಿದ್ದಂತೆ ಅವರ ಬೆಂಬಲಿಗರು, ಹಿತೈಷಿಗಳು ಸಂಭ್ರಮಾಚರಣೆ ಮಾಡಿದರು. ಮತ ಎಣಿಕೆ ಕೇಂದ್ರದ ಮುಂದೆ ಕುವೆಂಪು ರಸ್ತೆಯಲ್ಲಿ ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿದರು. ಅಲ್ಲದೆ, ಮತ ಎಣಿಕೆ ಕೇಂದ್ರದಿಂದ ಹೊರ ಬರುತ್ತಿದ್ದಂತೆ ಧರ್ಮೇಶ್ ಅವರಿಗೆ ಹೂವಿನ ಹಾರ ಹಾಕಿ ಶುಭಾಶಯ ತಿಳಿಸಿದರು.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತಗಳು?

ಧರ್ಮೇಶ್ಎಸ್.ಕುಮಾರ್
ತೀರ್ಥಹಳ್ಳಿ3062374
ಶಿವಮೊಗ್ಗ694563
ಹೊಸನಗರ51797
ಭದ್ರಾವತಿ10162184
ಕುಮಟಾ

ಹೊನ್ನಾವರ

518269

ಯಾರೆಲ್ಲ ಎಷ್ಟು ಮತಗಳನ್ನು ಪಡೆದಿದ್ದಾರೆ?

ಶಿವಮೊಗ್ಗ – ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕರ ಸ್ಥಾನಕ್ಕೆ ಒಂಭತ್ತು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಈ ಪೈಕಿ ಧರ್ಮೇಶ್ ಸಿರಿಬೈಲು ಮತ್ತು ಎಸ್.ಕುಮಾರ್ ಅವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಒಂಭತ್ತು ಅಭ್ಯರ್ಥಿಗಳು ಗಳಿಸಿರುವ ಮತಗಳ ಪಟ್ಟಿ.

ಅಭ್ಯರ್ಥಿಪಡೆದ ಮತಗಳು
ಕುಮಾರ್026
ಎಸ್.ಕುಮಾರ್3486
ಚೇತನಾ ಶ್ರೀಕಾಂತ್ ಹೆಗ್ಡೆ157
ಧರ್ಮೇಶ್ ಸಿರಿಬೈಲ್5808
ನಾಗರಾಜ್ ಮಾವಿನಕೆರೆ14
ಡಾ. ರಜನಿಕಾಂತ್93
ಕೆ.ಎಸ್.ರವಿಕುಮಾರ್551
ಲೋಕೇಶ್ ಎಸ್.ವಿ1127
ಶಶಿಧರ್ ಹೆಚ್.ಡಿ.20

ಮತಗಳು ತಿರಸ್ಕೃತ

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ 11,348 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 66 ಮತಗಳು ತಿರಸ್ಕೃತವಾಗಿದೆ. ವಿವಿಧ ಕಾರಣಕ್ಕೆ ಮತಗಳು ತಿರಸ್ಕೃತವಾಗಿದ್ದು, ಎಣಿಕೆ ವೇಳೆ ಅವುಗಳನ್ನು ಪ್ರತ್ಯೇಕಿಸಲಾಗಿತ್ತು.

shivamogga live subscribe New Kannada

ಮತ ಎಣಿಕೆ ಕೇಂದ್ರದ ಮುಂದೆ ಯಾವುದೆ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

VIDEO NEWS

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 15, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment