ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020

ಮೆಡಿಕಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಡಾ.ಬಾಲಸುಬ್ರಮಣಿ ನೇತೃತ್ವದ ತಂಡ ಈ ಆಪರೇಷನ್ ನೆರವೇರಿಸಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಬಾಲಸುಬ್ರಹ್ಮಣಿ, 35 ವರ್ಷದ ಚನ್ನಬಸಪ್ಪ ಅವರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

132614790 1296319824062768 3687668404297977512 o.jpg? nc cat=103&ccb=2& nc sid=8bfeb9& nc ohc=wiISO1QnIf0AX jDFjj& nc ht=scontent.fblr11 1

ನಾಲ್ಕು ವಿಭಿನ್ನ, ಕ್ಲಿಷ್ಟ ಕೇಸ್‍

ಕೇಸ್‍ 1 : ಚನ್ನಬಸಪ್ಪ (35), ಎಂಟು ವರ್ಷದಿಂದ ಹೃದಯದಲ್ಲಿ ಗೆಡ್ಡೆ ಬೆಳೆದಿತ್ತು. ಹಾಗಾಗಿ ಚನ್ನಬಸಪ್ಪ ಅವರ ದೇಹದ ಎಡ ಭಾಗ ಶಕ್ತಿಹೀನವಾಗಿತ್ತು. ಅನೇಕ ಆಸ್ಪತ್ರೆಗೆ ಅಲೆದಾಡಿದರೂ ಪ್ರಯೋಜವಾಗಿರಲಿಲ್ಲ. ಈಗ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚನ್ನಬಸಪ್ಪ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಕೇಸ್ 2 : ರವಿ (60), ಹುಟ್ಟಿನಿಂದ ಕಿವುಡ ಮತ್ತು ಮೂಕರಾಗಿದ್ದಾರೆ. 2020ರ ಜುಲೈನಲ್ಲಿ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದರು. ಆದರೆ ಎದೆನೋವು ಪುನರಾವರ್ತನೆಯಾಗಿತ್ತು. ಬಳಿಕ ಸಹ್ಯಾದ್ರಿ ನಾರಾಯಣ ಹೃದಯಾಲದಲ್ಲಿ ಪರೀಕ್ಷೆಗೊಳಪಡಿಸಿ, ಬೈಪಾಸ್ ಸರ್ಜರಿ ಮಾಡಲಾಯಿತು. ಕಿವುಡ ಮತ್ತು ಮೂಕರಿಗೆ ಬೈಪಾಸ್‍ ಸರ್ಜರಿ, ಆ ಬಳಿಕ ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸುವುದು ಕಷ್ಟಕರ. ಆದರೆ ಸಂವಹನ ಟೆಕ್ನಿಕ್ ಬಳಸಿ ರವಿ ಅವರಿಗೆ ತಿಳಿವಳಿಕೆ ಮೂಡಿಸಲಾಗಿದೆ. ಇದು ಅಪರೂಪದ ಪ್ರಕರಣ.

133420549 1296319937396090 2802667142320537629 n.jpg? nc cat=102&ccb=2& nc sid=8bfeb9& nc ohc=kkSM0jxdTeEAX9dt Fb& nc ht=scontent.fblr11 1

ಕೇಸ್ 3 : ಸಕ್ಕರೆ ಕಾಯಿಲೆ, ಕೈ, ಕಾಲು ನಡುಕ, ಪಾರ್ಕಿನ್ಸನ್‍ನಿಂದ ಬಳಲುವವರಿಗೆ ಬೈಪಾಸ್ ಸರ್ಜರಿ ಕಷ್ಟ. ಕಾಂತಪ್ಪ (68), ಎಂಬುವವರ ಮೂರು ರಕ್ತನಾಳದಲ್ಲಿ ರಕ್ತ ಸಂಚಾರಕ್ಕೆ ಅಡೆತಡೆ ಆಗಿತ್ತು. ಆದರೂ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅತ್ಯಂತ ಚಾಲೆಂಜಿಂಗ್ ಅನಿಸುವ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಕಾಂತಪ್ಪ ಅವರ ಆರೋಗ್ಯ ಸುಧಾರಣೆಯಾಗಿದೆ.

ಕೇಸ್ 4 : ಮೂರು ವರ್ಷದ ಹಿಂದೆ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರೂ, ರಕ್ತ ನಾಳದಲ್ಲಿ ಅಡೆತಡೆ ಉಂಟಾಯಿತು. ಹೃದಯದ ಕಾರ್ಯಕ್ಷಮತೆ ಶೇ.15ರಷ್ಟು ಇತ್ತು. ಇಂತಹ ರೋಗಿಗಳಿಗೆ ಅದು ಅಂತಿಮ ಕ್ಷಣ ಎಂದು ಹೇಳಲಾಗುತ್ತದೆ. ಚಂದ್ರಶೇಖರ್ (65) ಎಂಬುವವರಿಗೆ ಇದೆ ರೀತಿ ಸಮಸ್ಯೆ ಇತ್ತು. ಶಸ್ತ್ರ ಚಿಕಿತ್ಸೆ ಬಳಿಕ ಒಂದೇ ವಾರದಲ್ಲಿ ಹೃದಯದ ಕಾರ್ಯಕ್ಷಮತೆ ಶೇ.25 ರಿಂದ 30ರಷ್ಟು ಸುಧಾರಣೆ ಕಂಡಿದೆ.

ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಪತ್ರಿಕಾಗೋಷ್ಠಿಗೆ ಕರೆತರಲಾಗಿತ್ತು. ತಮ್ಮ ಆರೋಗ್ಯದಲ್ಲಿ ಚೇತರಿಗೆ ಕಾಣುತ್ತಿರುವುದನ್ನು ಅವರು ತಿಳಿಸಿದರು.

132933681 1296320047396079 1530582295812230149 n.jpg? nc cat=104&ccb=2& nc sid=8bfeb9& nc ohc=VfvYGzTV5F0AX qdAQD& nc oc=AQnqR0vQ8xPiF8 VNYk33gif0A5rYXFC7SHMKPj uJU3kWKeTAzDpT4GJn2W57psoeg& nc ht=scontent.fblr11 1

133131814 1296320240729393 7655667967093810783 n.jpg? nc cat=106&ccb=2& nc sid=8bfeb9& nc ohc=yT0f4zTPBPgAX BFFW & nc ht=scontent.fblr11 1

133115915 1296319917396092 1144392794956092014 n.jpg? nc cat=106&ccb=2& nc sid=8bfeb9& nc ohc=NnY OllUYl0AX92o7YT& nc ht=scontent.fblr11 1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2020

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment