ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020
ಶಾಂತಿನಗರ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಾಲಿಕೆ ವಿರೋಧಪಕ್ಷದ ನಾಯಕ ಹೆಚ್.ಸಿ. ಯೋಗೀಶ್ ನೇತೃತ್ವದಲ್ಲಿ ಹಸುವಿಗೆ ಸ್ನಾನ ಮಾಡಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
೩ ಮತ್ತು ೪ ವಾರ್ಡ್ಗೆ ಶಾಂತಿ ನಗರ ಮುಖ್ಯರಸ್ತೆಯೇ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಸವಳಂಗ ಹಾಗೂ ಹೊನ್ನಾಳಿ ರಸ್ತೆಯನ್ನು ಸೇರಿಸುವ ಬೈಪಾಸ್ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು, ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಜನ ಮತ್ತು ವಾಹನ ಸಂಚಾರ ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಾಂತಿನಗರದ ಸುತ್ತಮುತ್ತ ಸುಮಾರು ಸಾವಿರಾರು ಮನೆಗಳಿವೆ. ಜನ ಸಂಖ್ಯೆಯು ಹೆಚ್ಚಿದೆ. ಅಲ್ಲದೆ ಈ ನಗರ ಕೊಳಚೆ ಪ್ರದೇಶಕ್ಕೆ ಸೇರಿದೆ. ಹಾಗಾಗಿ ಇಲ್ಲಿ ರಸ್ತೆ ಇಕ್ಕಟ್ಟಿನಿಂದ ಮತ್ತು ಗುಂಡಿಗಳಿಂದ ತುಂಬಿಹೋಗಿದ್ದು, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಲೇ ಇದೆ. ಕೂಡಲೇ ರಸ್ತೆಯನ್ನು ಸರಿಪಡಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






