ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಗಣರಾಜ್ಯೋತ್ಸವ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ (discount sale) ದರದಲ್ಲಿ ಮಾರಾಟ ಮಾಡಲಾಗುವುದು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ನಲ್ಲಿಯೂ https://kpp.karnataka.gov.in ಶೇ 50ರ ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಮುದ್ರಿಸಿ ಪ್ರಕಟಿಸಿದೆ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





