ಶಿವಮೊಗ್ಗ: ಜಿಲ್ಲಾ ಬಂಜಾರ (Banjara) ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ನಾಯ್ಕ್, ಸಂಘದ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆಗೆ ಕಾರಣವೇನು?
ವೈಯಕ್ತಿಕ ಮತ್ತು ಕುಟುಂಬದ ಜವಾಬ್ದಾರಿ: ಪ್ರಸಕ್ತ ಸನ್ನಿವೇಶದಲ್ಲಿ ಕುಟುಂಬ ಹಾಗೂ ವೈಯಕ್ತಿಕ ಕೆಲಸಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಹೊಸ ಪೀಳಿಗೆಗೆ ಅವಕಾಶ: ಸಮಾಜದ ಎರಡನೇ ತಲೆಮಾರಿನ ಯುವಕರು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಲು ಅನುವು ಮಾಡಿಕೊಡುವ ಉದ್ದೇಶದಿಂದ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪತ್ರದಲ್ಲಿ ಇನ್ನು ಏನೇನಿದೆ?
ನಾಲ್ಕು ವರ್ಷದಿಂದ ಸಂಘದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಹಲವು ಸಮಾಜಮುಖಿ ಕಾರ್ಯ ಮಾಡಲಾಗಿದೆ. ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ