SHIVAMOGGA LIVE | 25 JULY 2023
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, ರಾಶಿ ರಾಶಿ ಹಾಫ್ ಹೆಲ್ಮೆಟ್ ವಶಕ್ಕೆ, ವಿಡಿಯೋಗಳು ವೈರಲ್
ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧಾಹ್ನ 12.30ಕ್ಕೆ ರಿಪ್ಪನ್ಪೇಟೆ, ಮಧ್ಯಾಹ್ನ 1.30ಕ್ಕೆ ಸಾಗರ, ಮಧ್ಯಾಹ್ನ 2.30ಕ್ಕೆ ತಾಳಗುಪ್ಪ ಹೋಬಳಿ, ಮಧ್ಯಾಹ್ನ 3.30ಕ್ಕೆ ಸೊರಬ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200