| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ (Sports) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನೆಹರು ಕ್ರೀಡಾಂಗಣದಲ್ಲಿ ಶಾಟ್ಪುಟ್ ಗುಂಡು ಎಸೆದು ಸಚಿವ ಮಧು ಬಂಗಾರಪ್ಪ ಕ್ರೀಡಾಕೂಟ ಉದ್ಘಾಟಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎರಡು ದಿನದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿದೆ.
ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ ಜಿಲ್ಲೆ ಕ್ರೀಡೆ ಮತ್ತು ಸಂಸ್ಕೃತಿಗೆ ಹೆಸರಾಗಿದೆ. ಈ ಹಿಂದೆ ಇಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿತ್ತು. ಆಗ ಎಸ್.ಎಂ.ಕೃಷ್ಣ ಸರ್ಕಾರ ಕೇವಲ 5 ಲಕ್ಷ ರೂ. ಅನುದಾನ ನೀಡಿತ್ತು. ಆದರೆ ಕ್ರೀಡಾಕೂಟ ನಡೆಸಲು ಇಷ್ಟು ಹಣ ಸಾಕಾಗುವುದಿಲ್ಲ ಎಂದು ಎಸ್.ಬಂಗಾರಪ್ಪ ಅವರು ಕ್ರೀಡಾಂಗಣಕ್ಕೆ ಬಂದು ಕುಳಿತರು. ಸುಮಾರು 70 ಲಕ್ಷ ರೂ. ಹಣ ಸಂಗ್ರಹವಾಯಿತು. ಇದರಿಂದ ಅದ್ಧೂರಿಯಾಗಿ ಕ್ರೀಡಾಕೂಟ ನಡೆಸಲಾಗಿತ್ತು.
– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಕ್ರೀಡಾಕೂಟವು ಸರ್ಕಾರಿ ನೌಕರರಿಗೆ ಉತ್ಸಾಹ ತುಂಬಲಿದೆ. ನಾನು ಕೂಡ ಕ್ರೀಡಾಪಟು. ಈ ಹಿಂದೆ ಅಟ್ಲಾಂಟದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ನಾನು ಭಾಗವಹಿಸಿದ್ದೆ.
– ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ
ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿ.ಇ.ಒ ಹೇಮಂತ್.ಎನ್, ಪಾಲಿಕೆ ಕಮಿಷನರ್ ಡಾ. ಕವಿತಾ ಯೋಗಪ್ಪನವರ್ ಸೇರಿದಂತೆ ಹಲವರು ಇದ್ದರು.






ಇದನ್ನೂ ಓದಿ » ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?
Government employees association district level sports meet in Shivamogga Nehru Stadium.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()