ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ (Sports) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನೆಹರು ಕ್ರೀಡಾಂಗಣದಲ್ಲಿ ಶಾಟ್‌ಪುಟ್‌ ಗುಂಡು ಎಸೆದು ಸಚಿವ ಮಧು ಬಂಗಾರಪ್ಪ ಕ್ರೀಡಾಕೂಟ ಉದ್ಘಾಟಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎರಡು ದಿನದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿದೆ.

ಯಾರೆಲ್ಲ ಏನೆಲ್ಲ ಹೇಳಿದರು?

government employees association district level sports meet
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶಾಟ್‌ಪುಟ್‌ ಗುಂಡು ಎಸೆದ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ ಜಿಲ್ಲೆ ಕ್ರೀಡೆ ಮತ್ತು ಸಂಸ್ಕೃತಿಗೆ ಹೆಸರಾಗಿದೆ. ಈ ಹಿಂದೆ ಇಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿತ್ತು. ಆಗ ಎಸ್‌.ಎಂ.ಕೃಷ್ಣ ಸರ್ಕಾರ ಕೇವಲ 5 ಲಕ್ಷ ರೂ. ಅನುದಾನ ನೀಡಿತ್ತು. ಆದರೆ ಕ್ರೀಡಾಕೂಟ ನಡೆಸಲು ಇಷ್ಟು ಹಣ ಸಾಕಾಗುವುದಿಲ್ಲ ಎಂದು ಎಸ್.ಬಂಗಾರಪ್ಪ ಅವರು ಕ್ರೀಡಾಂಗಣಕ್ಕೆ ಬಂದು ಕುಳಿತರು. ಸುಮಾರು 70 ಲಕ್ಷ ರೂ. ಹಣ ಸಂಗ್ರಹವಾಯಿತು. ಇದರಿಂದ ಅದ್ಧೂರಿಯಾಗಿ ಕ್ರೀಡಾಕೂಟ ನಡೆಸಲಾಗಿತ್ತು.

– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಕ್ರೀಡಾಕೂಟವು ಸರ್ಕಾರಿ ನೌಕರರಿಗೆ ಉತ್ಸಾಹ ತುಂಬಲಿದೆ. ನಾನು ಕೂಡ ಕ್ರೀಡಾಪಟು. ಈ ಹಿಂದೆ ಅಟ್ಲಾಂಟದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ನಾನು ಭಾಗವಹಿಸಿದ್ದೆ.

– ಬಲ್ಕಿಷ್ ಬಾನು, ವಿಧಾನ ಪರಿಷತ್‌ ಸದಸ್ಯೆ

ಶಾಸಕ ಎಸ್‌.ಎನ್.‌ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ, ಜಿಲ್ಲಾಧ್ಯಕ್ಷ ಆರ್‌.ಮೋಹನ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸಿ.ಇ.ಒ ಹೇಮಂತ್‌.ಎನ್‌, ಪಾಲಿಕೆ ಕಮಿಷನರ್‌ ಡಾ. ಕವಿತಾ ಯೋಗಪ್ಪನವರ್‌ ಸೇರಿದಂತೆ ಹಲವರು ಇದ್ದರು.

government employees association district level sports meet
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಲೂನ್‌ ಹಾರಿಬಿಟ್ಟ ಸಚಿವ ಮಧು ಬಂಗಾರಪ್ಪ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
government employees association district level sports meet
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದ ಉದ್ಘಾಟನೆ. ಪ್ರತಿಜ್ಞೆ ಸ್ವೀಕಾರ.
government employees association district level sports meet
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ತಂದ ಕ್ರೀಡಾಪಟು.
government employees association district level sports meet
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ನೌಕರರು.
government employees association district level sports meet
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್‌.ಎನ್.ಚನ್ನಬಸಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?

Government employees association district level sports meet in Shivamogga Nehru Stadium.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 5, 2025 at 1:42 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 5, 2025

Leave a Comment