SHIVAMOGGA LIVE NEWS | 25 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ವಾಹನಗಳ ಸರಾಗ ಸಂಚಾರಕ್ಕೆ ಬಿ.ಹೆಚ್.ರಸ್ತೆಗೆ ಸಂಪರ್ಕ ಕಲ್ಪಿಸುವೆಡೆ ಡಿವೈಡರ್ ನಿರ್ಮಿಸಲಾಗುತ್ತಿದೆ.
ಹೊಳೆಹೊನ್ನೂರು ರಸ್ತೆಗೆ ನೇರವಾಗಿ ಸಂಪರ್ಕ ಕಲ್ಪಿಸಲು ವೃತ್ತಾಕಾರದ ಮೇಲ್ಸೇತುವೆ ನಿರ್ಮಿಸಲಾಗಿದೆ. ಕಾಮಗಾರಿ ಕೊನೆ ಹಂತಕ್ಕೆ ತಲುಪಿದೆ. ಸೇತುವೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಡಿವೈಡರ್ಗಳನ್ನು ನಿರ್ಮಿಸಲಾಗುತ್ತಿದೆ. ಸೇತುವೆಯಿಂದ ಕೆಳಗಿಳಿದು ಬರುವ ವಾಹನಗಳು ಬಿ.ಹೆಚ್.ರಸ್ತೆಯ ಎಡ ಭಾಗಕ್ಕೆ ಸಂಚರಿಸಲು ಪ್ರತ್ಯೇಕ ಡಿವೈಡರ್ ನಿರ್ಮಿಸಲಾಗಿದೆ.
ಇನ್ನು, ಎನ್ಸಿಸಿ ಕಚೇರಿ ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಡಿವೈಡರ್ ನಿರ್ಮಿಸಲಾಗುತ್ತಿದೆ. ಚಾಲಕರಲ್ಲಿ ಗೊಂದಲ ನಿವಾರಣೆಗೆ ಮತ್ತು ಅಪಘಾತ ತಡೆಗೆ ಈ ಕ್ರಮ ವಹಿಸಲಾಗಿದೆ. ಮೇಲ್ಸೇತುವೆಯಿಂದ ಕೆಳಗೆ ಬರುವ ವಾಹನಗಳು ಡಿವೈಡರ್ ಹಾದು ತುಂಗಾ ಸೇತುವೆ ಕಡೆಗೆ ತೆರಳಬೇಕಾಗುತ್ತದೆ.

ಸವಳಂಗ ರಸ್ತೆ ಮೇಲ್ಸೇತುವೆ ಪರಿಶೀಲನೆ
ಸವಳಂಗ ರಸ್ತೆಯಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆಯ ಕೊನೆಯ ಹಂತದ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು. ಇದೇ ವೇಳೆ ಸ್ಥಳೀಯರ ಮನವಿಗೆ ಸ್ಪಂದಿಸಿ, ಸೇತುವೆಯ ಕೆಳಭಾಗದಲ್ಲಿ ದ್ವಿಚಕ್ರ ಹಾಗೂ ಇನ್ನಿತರ ವಾಹನಗಳು ಸರಾಗವಾಗಿ ಸಂಚರಿಸಲು ಸಾಧ್ಯವಾಗುವಂತೆ ಯೋಜನೆಯಲ್ಲಿ ಬದಲಾವಣೆ ಮಾಡಬೇಕು ಎಂದು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ – ಎಲೆಚುಕ್ಕೆ ರೋಗ, ಕೆಎಫ್ಡಿ ಭೀತಿ, ಜಿಲ್ಲೆಯ ಸಮಸ್ಯೆಗಳ ಕುರಿತು ಮಹತ್ವದ ಚರ್ಚೆ, ಗ್ಯಾರಂಟಿಗಳನ್ನು ತಲುಪಿಸುವಂತೆ ಸೂಚನೆ
ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಆರತಿ ಪ್ರಕಾಶ್, ರೈಲ್ವೆ ಅಧಿಕಾರಿಗಳಾದ ರಾಜಕುಮಾರ್, ಪ್ರಮುಖರಾದ ದಿನೇಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.


LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






