ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
SHIMOGA : ಹಣ ಕೊಟ್ಟು ಜೇಬು ತುಂಬಿಸುವುದು ಗ್ಯಾರಂಟಿ ಯೋಜನೆಗಳ ಉದ್ದೇಶವಲ್ಲ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಉಲ್ಬಣಿಸಿರುವ ಸಂದರ್ಭ ಪ್ರತಿ ಕುಟುಂಬದಲ್ಲಿ ಆತ್ಮಬಲ ತುಂಬುವುದು ಈ ಯೋಜನೆಗಳ ಧ್ಯೇಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಡಿಕೆಶಿ ಭಾಷಣದ 3 ಪಾಯಿಂಟ್
ನಗರದ ಫ್ರೀಡಂ ಪಾರ್ಕ್ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಿರುದ್ಯೋಗಿಗಳು ಉದ್ಯೋಗಿಗಳಾಗಿ, ಬಳಿಕ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗಗಳನು ಸೃಷ್ಟಿಸಬೇಕು. ಇದು ಯುವ ನಿಧಿ ಯೋಜನೆಯ ಪ್ರಮುಖ ಧ್ಯೇಯ. ಅದ್ದರಿಂದ ಯುವನಿಧಿ ಯೋಜನೆಯ ಪ್ರತಿ ಫಲಾನುಭವಿ ಉದ್ಯೋಗ ಸೃಷ್ಟಿ ಮಾಡಿದರೆ ಯೋಜನೆ ಸಾರ್ಥಕ್ಯ ಪಡೆಯಲಿದೆ.
ಚುನಾವಣೆ ಸಂದರ್ಭ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ನಿಮ್ಮ ಮುಂದಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡು ರಾಜ್ಯ ಸರ್ಕಾರ ದೇಶದಲ್ಲೇ ಮಾದರಿಯಾಗಿದೆ. ಗೃಹ ಜ್ಯೋತಿ ಯೋಜನೆ ಮೂಲಕ ಒಂದೂವರೆ ಕೋಟಿ ಮನೆಗಳನ್ನು ಬೆಳಗುತ್ತಿದ್ದೇವೆ. ಯಜಮಾನಿಗೆ 2 ಸಾವಿರ ರೂ., ಅನ್ನಭಾಗ್ಯಕ್ಕೆ ಅಕ್ಕಿ ಸಿಗದ ಹಿನ್ನೆಲೆ ನಗದು ವರ್ಗಾವಣೆ, ಪ್ರತಿ ದಿನ 60 ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ವಿವಿಧೆಡೆ ಹೊಟೇಲ್, ಅಂಗಡಿಗಳಲ್ಲಿ ವ್ಯಾಪಾರ ಚನ್ನಾಗಿ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಯೋಜನೆಯಿಂದ ಏನೇನೆಲ್ಲ ಲಾಭವಿದೆ? ಇಲ್ಲಿದೆ ಸಿಎಂ ಹೇಳಿದ 4 ಪಾಯಿಂಟ್
ಪ್ರಧಾನಿಯಾಗಿದ್ದಾಗ ರಾಜೀವ್ ಗಾಂಧಿ ಅವರು ಯುವಕರಿಗಾಗಿ ಯೋಜನೆ ರೂಪಿಸಿದ್ದರು. ಈಗ ಯುವನಿಧಿ ಕೂಡ ಅಂತಹುದೆ ಯೋಜನೆ. ಐದನೆ ಪ್ರಮುಖ ಗ್ಯಾರಂಟಿಯಾದ ಯುವನಿಧಿ ಜಾರಿಗೆ ಬಂದಿದೆ. ಯುವಕರ ಕೌಶಲ್ಯಾಭಿವೃದ್ಧಿ ಮಾಡಿ ಉದ್ಯೋಗ ಸೃಷ್ಟಿ ಯೋಜನೆಯ ಗುರಿ. ಕಾಂಗ್ರೆಸ್ ಸರ್ಕಾರ ಯುವಕರ ಜೊತೆಗಿದೆ. ಯುವಕರು ಸಾಧನೆ ಮಾಡುವಂತ ಗಮನ ಹರಿಸಬೇಕು. ಸಾಧನೆ ಇಲ್ಲದೆ ಸತ್ತರ ಸಾವಿನ ಅವಮಾನ. ಆದರ್ಶವಿಲ್ಲದೆ ಬದುಕಿದರೆ ಬದುಕಿಗೆ ಅವಮಾನ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















