ಬೆಂಗಳೂರು ಬಳಿಕ ಶಿವಮೊಗ್ಗದಲ್ಲಿಯೇ ಸುಸಜ್ಜಿತ ಕಚೇರಿ, ಬಲಿಷ್ಠ ಸಂಘಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 FEBRUARY 2023

SHIMOGA : NSUI ಸಂಘಟನೆ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ, ಸಮಾಜದಲ್ಲಿ ವ್ಯಕ್ತಿಗತ ಜವಾಬ್ದಾರಿ ಹೆಚ್ಚಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಿಲ್ಲಾ ಎನ್.ಎಸ್.ಯು.ಐ. ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

Shimoga-NSUI-Office-Inagurated-by-DK-Shivakumar

ನಾನು NSUI ನಿಂದ ರಾಜಕೀಯ ಜೀವನ ಆರಂಭಿಸಿದೆ. ಇಂದು ರಾಜಕೀಯವಾಗಿ ಎತ್ತರಕ್ಕೆ ಬೆಳೆದಿದ್ದೇನೆ. ಇದಕ್ಕೆ ಕಾರಣ ವಿದ್ಯಾರ್ಥಿ ದೆಸೆಯಲ್ಲಿಯೇ ನನ್ನಲ್ಲಿ ರಾಜಕೀಯ ಪ್ರಜ್ಞೆ ಮೂಡಿದ್ದು. ಎನ್.ಎಸ್.ಯು.ಐ. ದೇಶದ ಭವಿಷ್ಯದ ನಾಯಕರನ್ನು ಬೆಳೆಸುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ಹೊರತುಪಡಿಸಿದರೆ ರಾಜ್ಯದಲ್ಲಿ ಬೇರೆಲ್ಲೂ NSUI ಇಷ್ಟು ಸುಸಜ್ಜಿತ ಕಚೇರಿ ಹೊಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡರು ಸಕ್ರಿಯವಾಗಿದ್ದು ಮಾದರಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಎನ್.ರಮೇಶ್, ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಮುಖಂಡರಾದ ವಿಜಯಕುಮಾರ್, ಕೆ.ದೇವೇಂದ್ರಪ್ಪ, ಸಿ.ಜಿ.ಮಧುಸೂದನ್, ಕೆ.ಚೇತನ್, ಮಹಮ್ಮದ್ ನಿಹಾಲ್ ಮುಂತಾದವರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment