ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿದ್ದಕ್ಕೆ ಇವತ್ತು ಅವರ ಅಭಿಮಾನಿ ಬಳಗ, ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ಮಠದ ಮುಂದೆ ಕುಳಿತಿದ್ದ ಭಿಕ್ಷುಕರಿಗೆ ಮಾಸ್ಕ್ ವಿತರಿಸಿದರು.

ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಭಿಕ್ಷಕರು ಮತ್ತು ಬಡವರಿಗೆ ಮಾಸ್ಕ್ ವಿತರಿಸಲಾಯಿತು. ಕರೋನ ಭೀತಿಯಿಂದಾಗಿ ಎಲ್ಲರು ಮಾಸ್ಕ್ ಧರಿಸುತ್ತಿದ್ದಾರೆ. ಬಡವರಿಗೆ ಮಾಸ್ಕ್ ವಿತರಿಸುವ ಅಗತ್ಯವಿದೆ. ಹಾಗಾಗಿ ಮಾಸ್ಕ್ ನೀಡುತ್ತಿದ್ದೇವೆ ಎಂದು ಬಳಗದ ಪ್ರಮುಖರು ತಿಳಿಸಿದರು.
ಮಾಸ್ಕ್ ಜೊತೆಗೆ ನಿರ್ಗತಿಕರಿಗೆ ಹಣ್ಣು ವಿತರಿಸಲಾಯಿತು. ಪ್ರಮುಖರಾದ ಕವಿತಾ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200