ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 20 JULY 2023
SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ (Doctorate) ನೀಡಲಿದೆ. ಜು.21ರಂದು ನಡೆಯಲಿರುವ 8ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ. ಆರ್.ಸಿ.ಜಗದೀಶ್ ಅವರು, ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರ ಅನುಮತಿಗೆ ಕಳುಹಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊಡುಗೆ ಪರಿಗಣಿಸಿ ಗೌರವ ಡಾಕ್ಟರೇಟ್ (Doctorate) ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರು ಕೃಷಿಗೆ ಪ್ರತ್ಯೇಕ ಆಯವ್ಯಯ ಮಂಡಿಸಿದ್ದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ವಿನೂತನ ಯೋಜನೆಗಳನ್ನು ಜಾರಿಗೊಳಿಸಿದ್ದು, ಕೃಷಿ ಶಿಕ್ಷಣ, ಸಂಶೋಧನೆಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಮುನ್ನುಡಿ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಡಾ. ಆರ್.ಸಿ.ಜಗದೀಶ್ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, 2 ದಿನ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?
ಸಾಗರ ತಾಲೂಕು ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅವರಣದಲ್ಲಿ ಘಟಿಕೋತ್ಸವ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. 8ನೇ ಘಟಿಕೋತ್ಸವದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆಗೆ ಪದವಿಯ 8, ಎಂ.ಎಸ್ಸಿಯ 7 ವಿದ್ಯಾರ್ಥಿಗಳಿಗೆ ಒಟ್ಟು 37 ಚಿನ್ನದ ಪದಕಗಳನ್ನು ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಪಡೆದ 409 ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ಪಡೆದ 101 ವಿದ್ಯಾರ್ಥಿಗಳು, 23 ವಿದ್ಯಾರ್ಥಿಗಳು ಪಿಹೆಚ್ಡಿ ಪಡೆದಿದ್ದಾರೆ.
ಕುಲಸಚಿವ ಡಾ. ಕೆ.ಸಿ.ಶಶಿಧರ್ ಸುದ್ದಿಗೋಷ್ಠಿಯಲ್ಲಿದ್ದರು.

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು














