ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2023

SHIMOGA : ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿ ಆದಾಯಕ್ಕು ಮೀರಿದ ಆಸ್ತಿ ಪತ್ತೆ ಹಚ್ಚಿದ್ದಾರೆ. ಏ.24ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಶಿವಮೊಗ್ಗದ ಯಾವ್ಯಾವ ಅಧಿಕಾರಿ ಬಳಿ ಏನೇನು ಸಿಕ್ಕಿದೆ.

Lokayuktha-Raid-on-Retired-Forest-Officer-House

ಐ.ಎಂ.ನಾಗರಾಜ್‌, ನಿವೃತ್ತ ಡಿಸಿಎಫ್‌

ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್‌ ಆಗಿ ನಿವೃತ್ತರಾಗಿರುವ ಐ.ಎಂ.ನಾಗರಾಜ್‌ ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿ, ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ.

ಹೊನ್ನಾಳಿಯಲ್ಲಿ ಒಂದು ಮನೆ, ಶಿವಮೊಗ್ಗ ಲಗಾನ್‌ ಕಲ್ಯಾಣ ಮಂಟಪ ಬಳಿ ಒಂದು ಮನೆ ಮತ್ತು ಮಳಿಗೆ, 4 ಕಾಂಪ್ಲೆಕ್ಸ್‌, ಬೆಂಗಳೂರಿನ ಕಗ್ಗಲಿಪುರದಲ್ಲಿ 1 ಫ್ಲಾಟ್‌, ಶಿವಮೊಗ್ಗದ ಅನುಪಿನಕಟ್ಟೆ ಬಳಿ 1 ಫಾರ್ಮ್‌ ಹೌಸ್‌, 10 ಎಕರೆ ಅಡಕೆ ತೋಟ, ಶಿವಮೊಗ್ಗದ ಸಾಗರ ರಸ್ತೆಯಲ್ಲಿ ದುರ್ಗಾಂಬ ಸರ್ವಿಸ್‌ ಸ್ಟೇಷನ್‌, ಭದ್ರಾವತಿಯ ಚನ್ನಗಿರಿ ರಸ್ತೆಯಲ್ಲಿ ಶ್ರೀದೇವಿ ಸರ್ವಿಸ್‌ ಸ್ಟೇಷನ್‌, ಅಟಲ್‌ ಬಿಹಾರಿ ವಾಜಪೇಯ ಬಡಾವಣೆಯಲ್ಲಿ 2 ಸೈಟ್‌, ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ 1 ಫ್ಲಾಟ್‌, ಮಂಡ್ಲಿ ಕಲ್ಲೂರು ಕೈಗಾರಿಕಾ ಪ್ರದೇಶದಲ್ಲಿ 3 ಫ್ಲಾಟ್‌, ಶ್ರೀರಾಂಪುರದಲ್ಲಿ 2 ಸೈಟ್‌, 4 ನಾಲ್ಕು ಚಕ್ರದ ವಾಹನಗಳು, 1 ದ್ವಿಚಕ್ರ ವಾಹನ, 16.04 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.

ಎನ್.ಜೆ.ನಾಗರಾಜ್‌, ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌

ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಎನ್.ಜೆ.ನಾಗರಾಜ್‌ ಅವರು ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ತಹಶೀಲ್ದಾರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ – ಭದ್ರಾ ಜಲಾಶಯದಿಂದ ಏ.27ರಿಂದ ಪ್ರತಿದಿನ ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ, ಎಷ್ಟು ದಿನ? ಕಾರಣವೇನು?

ನಾಗರಾಜ್‌ ಅವರ ಬಳಿ ಶಿಕಾರಿಪುರದ ಚನ್ನಕೇಶವ ನಗರದಲ್ಲಿ 1 ಮನೆ, ಚನ್ನಗಿರಿಯ ನಿಂಬಾಪುರದಲ್ಲಿ 1 ಮನೆ, 244 ಗ್ರಾಂ ಚಿನ್ನಾಭರಣ, 533 ಗ್ರಾಂ ಬೆಳ್ಳಿ ವಸ್ತುಗಳು, 1 ಕಾರು, 1 ದ್ವಿಚಕ್ರ ವಾಹನ, ನಾಗರಾಜ್‌ ಮತ್ತು ಅವರ ಕುಟುಂಬದವರಿಗೆ ಸಂಬಂಧಿಸಿದ ಸ್ಥಿರಾಸ್ತಿ ಪತ್ರಗಳು, ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿರುವ ದಾಖಲೆಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 26, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment