SHIVAMOGGA LIVE NEWS | 1 DECEMBER 2022
ಶಿವಮೊಗ್ಗ : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಭದ್ರಾವತಿಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದಲ್ಲಿಯು ಮಗುವೊಂದರ ಮೇಲೆ ಬೀದಿ ನಾಯಿಗಳು ದಾಳಿ (dog bite) ನಡೆಸಿವೆ. ಗಾಯಗೊಂಡಿರುವ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪುರಲೆಯ ಅವಿನಾಶ್ ಮತ್ತು ರೇಣುಕಾ ದಂಪತಿಯ ಮಗಳು ಪ್ರತೀಕ್ಷಾ ಮೇಲೆ ಬೀದಿ ನಾಯಿಗಳು (dog bite) ದಾಳಿ ನಡೆಸಿವೆ. ಎಡಗೈಯನ್ನು ಕಚ್ಚಿದ್ದು, ಗಂಭೀರ ಗಾಯವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಗುವಿನ ಆರೋಗ್ಯ ವಿಚಾರಿಸಿದರು.
ಘಟನೆ ಕುರಿತು ಪ್ರತೀಕ್ಷಾಳ ಪೋಷಕರಿಂದ ಮಾಹಿತಿ ಪಡೆದ ಧೀರರಾಜ್ ಹೊನ್ನವಿಲೆ, ಚಿಕಿತ್ಸೆ ಕುರಿತು ವೈದ್ಯರೊಂದಿಗೆ ಚರ್ಚಿಸಿದರು. ಇನ್ನು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿ ಸೂಚನೆ ನೀಡಿದರು.
ALSO READ – 10 ನಾಯಿಗಳ ದಾಳಿ, 4 ವರ್ಷದ ಬಾಲಕ ಸಾವು, ಕೇಸ್ ದಾಖಲು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200