SHIVAMOGGA LIVE NEWS | 20 APRIL 2024
SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್ ಸ್ಟೋರೇಜ್. ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು ಹರಿಸಬೇಕಿದೆ. 3 ಟಿಎಂಸಿ ನೀರು ಬಾಕಿ ಇದೆ. ಇದನ್ನು ನಾಲೆಯ ಮೂಲಕ ಅಡಿಕೆ, ತೆಂಗಿನ ತೋಟಕ್ಕೆ ಹರಿಸಬೇಕಿದೆ ಎಂದು ಆಗ್ರಹಿಸಿದರು.
‘ಮತ್ತೆ ನದಿಗೆ ನೀರು ಬಿಡಬಾರದುʼ
ಗದಗ, ಬೆಟಗೇರಿ ನಗರಕ್ಕೆ ಕುಡಿಯುವ ನೀರಿಗೆ ಹರಿಸಬೇಕು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ನೀರಾವರಿ ಇಲಾಖೆಗೆ ಪತ್ರ ಬರೆದಿದ್ದಾರೆ. ಈಗಾಗಲೇ ಮಾರ್ಚ್ 30 ರಿಂದ ಏಪ್ರಿಲ್ 6ರವರೆಗೆ ಗದಗ, ಬೆಟಗೇರಿ ನಗರದ ಕುಡಿಯುವ ನೀರಿಗಾಗಿ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದೆ. ಈ ಮೊದಲು ಒಮ್ಮೆ ನೀರು ಹರಿಸಿದರೆ ಮೂರು ತಿಂಗಳು ಬಳಕೆ ಮಾಡುತ್ತಿದ್ದರು. ಹಾಗಾಗಿ ಜಲಾಶಯದಿಂದ ನದಿಗೆ ನೀರು ಹರಿಸಬಾರದು. ನೀರು ಹರಿಸಿದರೆ ಶಿವಮೊಗ್ಗ, ದಾವಣಗೆರೆ, ಹಾವೇರಿ ಜಿಲ್ಲೆಯ ಅಡಿಕೆ, ತೆಂಗು ಬೆಳೆಗಾರರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಆರೋಪಿಸಿದರು.
ಇದನ್ನೂ ಓದಿ – ‘ಕರ್ನಾಟಕಕ್ಕೆ ಮೋದಿ ಚೊಂಬು, ಲೇವಡಿ ಮಾಡಿದ್ದ ಮೋದಿಯಿಂದಲೇ ಈಗ ಗ್ಯಾರಂಟಿ ಪದ ಬಳಕೆ’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200