ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ನೀಡಿದ ಡಾ. ಧನಂಜಯ ಸರ್ಜಿ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಉದ್ಯೋಗಕಾಂಕ್ಷಿಗಳಿಗೆ ನೆರವಾಗಲು ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ‘ಕಾಯಕ ಸೇತು’ ವೆಬ್‌ಸೈಟ್‌ (Jobs Website) ಆರಂಭಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತು ಹೊರ ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲ ಬಗೆಯ ಉದ್ಯೋಗದ ಮಾಹಿತಿ ಒಂದೇ ವೇದಿಕೆಯಲ್ಲಿ ದೊರೆಯಲಿದೆ.

ಸಂಸದ ಬಿ.ವೈ.ರಾಘವೇಂದ್ರ ಕಾಯಕ ಸೇತು ವೆಬ್‌ಸೈಟ್‌ ಅನಾವರಣ ಮಾಡಿದರು. ಈ ವೆಬ್‌ಸೈಟ್‌ನಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಉದ್ಯೋಗಾಕಾಂಕ್ಷಿಗಳಿಗೆ ನೆರವು ನೀಡಲಾಗುತ್ತಿದೆ. ಇದು ಉದ್ಯೋಗ ಮತ್ತು ಉದ್ಯೋಗಿಗಳನ್ನು ಅರಸುವವರಿಗೆ ಅನುಕೂಲವಾಗಿದೆ. ಕಾಯಕ ಸೇತು ಹೇಗೆ ಕೆಲಸ ಮಾಡಲಿದೆ? ಇಲ್ಲಿದೆ ಅದರ ಮಾಹಿತಿ.

ಕಾಯಕ ಸೇತು ಬಳಸೋದು ಹೇಗೆ?

point-1ಉದ್ಯೋಗಾಕಾಂಕ್ಷಿಗಳು https://www.kayakasetu.com ವೆಬ್‌ಸೈಟ್‌ಗೆ ಭೇಟಿ ನೀಡಿ ರಿಜಿಸ್ಟರ್‌ ಮಾಡಿಕೊಳ್ಳಬೇಕು. ಇನ್ನು ಪ್ರತಿ ಬಾರಿ ಲಾಗಿನ್‌ ಮಾಡಲು ಜಿ ಮೇಲ್‌ ಮತ್ತು ಪಾಸ್‌ ವರ್ಡ್‌ ಬಳಕೆ ಮಾಡಬೇಕು.

point-2ರಿಜಿಸ್ಟರ್‌ ಆದ ಮೇಲೆ ಸ್ವ ವಿವರ ಅಪ್‌ಲೋಡ್‌ ಮಾಡಬೇಕು. ಇದರಲ್ಲಿ ಶೈಕ್ಷಣಿಕ ಮಾಹಿತಿ, ಕೌಶಲ್ಯದ ಕುರಿತು ಸಂಪೂರ್ಣ ಮಾಹಿತಿ ಇರಬೇಕು. ಈ ಮಾಹಿತಿಗಳನ್ನು AI ತಂತ್ರಾಂಶದ ಮೂಲಕ ಉದ್ಯೋಗದಾತರಿಗೆ ತಲುಪಿಸಲಾಗುತ್ತದೆ.

MLC-Dr-Dhananjaya-Sarji-Kayaka-setu-website

point-3ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಸ್ಕಿಲ್‌ ಆಧಾರದಲ್ಲಿ ಲಭ್ಯವಿರುವ ಉದ್ಯೋಗಗಳನ್ನು ವೀಕ್ಷಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

point-4ಶಿವಮೊಗ್ಗ ಜಿಲ್ಲೆಯ ಸಣ್ಣ ಸಂಸ್ಥೆಗಳಿಂದ ಕಾರ್ಖಾನೆಗಳ ತನಕ ಎಲ್ಲ ಬಗೆಯ ಉದ್ಯೋಗಗಳು ಬೆರಳ ತುದಿಯಲ್ಲೆ ದೊರೆಯಲಿದೆ. ಡಾ. ಧನಂಜಯ ಸರ್ಜಿ ಅವರ ಶಾಸಕರ ಕಚೇರಿಯಿಂದಲೆ ಈ ವೆಬ್‌ಸೈಟ್‌ ಕಾರ್ಯನಿರ್ವಹಿಸಲಿದೆ.

ಡಾ. ಧನಂಜಯ ಸರ್ಜಿ ಹೇಳಿದ್ದೇನು?

ವೆಬ್‌ಸೈಟ್‌ ಕುರಿತು ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಇದು ಉಚಿತ ವೆಬ್‌ಸೈಟ್‌. ಉದ್ಯೋಗ ನೀಡುವವರು, ಉದ್ಯೋಗ ಬಯಸುವವರಿಗೆ ಸೇತುವೆಯಾಗಿ ಕೆಲಸ ಮಾಡುತ್ತದೆ. ವೆಬ್‌ಸೈಟ್‌ನಲ್ಲಿ ಯಾವೆಲ್ಲ ಉದ್ಯೋಗಗಳಿವೆ. ಅವುಗಳಿಗೆ ಅರ್ಹತೆಗಳೇನು, ಮಾನದಂಡವೇನು ಎಂಬ ಅಂಶಗಳಿರುತ್ತವೆ. ಉದ್ಯೋಗಾಕಾಂಕ್ಷಿಗಳು CV ಅಪ್‌ಲೋಡ್ ಮಾಡುತ್ತಿದ್ದಂತೆ ಎಐ ಮೂಲಕ ವಿಶ್ಲೇಷಣೆ ಮಾಡಲಾಗುತ್ತದೆ. ಹತ್ತು ಮಾನದಂಡಗಳಲ್ಲಿ ಎಷ್ಟಕ್ಕೆ ಅರ್ಹತೆ ಇದೆ ಎಂದು ಅದು ತಿಳಿಸುತ್ತದೆ ಎಂದರು.

kayaka setu job portal
ಕಾಯಕ ಸೇತು ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದ ಸಂಸದ ರಾಘವೇಂದ್ರ.

ಜಿಲ್ಲೆಯಲ್ಲಿ ಉದ್ಯೋಗವಕಾಶ ಹೆಚ್ಚಿಸಲು ವೆಬ್‌ಸೈಟ್‌ ಆರಂಭಿಸಲಾಗಿದೆ. ವೈದ್ಯಕೀಯ, ಫೌಂಡ್ರಿ, ಏಜೆನ್ಸಿ, ಕಾಲೇಜು ಸೇರಿದಂತೆ ಯಾವುದೆ ಉದ್ಯೋಗವಾದರು ಅದಕ್ಕೆ ಇಲ್ಲಿ ಅವಕಾಶವಿದೆ. ಉದ್ಯೋಗಾಕಾಂಕ್ಷಿಗಳಿಗೆ ಹಂತ ಹಂತವಾಗಿ ಕೌಶಲ್ಯ ಅಭಿವೃದ್ಧಿ ಮಾಡುವ ಉದ್ದೇಶವೂ ಇದೆ ಎಂದು ತಿಳಿಸಿದರು.

ಇದನ್ನೂ ಓದಿ » ‘ನಿಮ್ಮನ್ನು ಅರೆಸ್ಟ್‌ ಮಾಡ್ತೀವಿ’, ನಿಮಗು ಬರಬಹುದು ಇಂತಹ ಫೋನ್‌ ಕರೆ, ಶಿವಮೊಗ್ಗದ ಶಿಕ್ಷಕಿ ಮಾಡಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment