| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 NOVEMBER 2020
ಕರೋನ, ಲಾಕ್ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ರಂಗ ಚಟುವಟಿಕೆ ಶಿವಮೊಗ್ಗದಲ್ಲಿ ಪುನಾರಂಭವಾಗಿದೆ. ಎಂಟು ತಿಂಗಳ ಬಳಿಕ ಮೊದಲ ನಾಟಕ ಪ್ರದರ್ಶನಕ್ಕೆ ರಂಗಾಸಕ್ತರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
![]()
ಯಾವುದು ಮೊದಲ ನಾಟಕ?
ಶಿವಮೊಗ್ಗ ರಂಗಾಯಣ ಸಭಾಂಗಣದಲ್ಲಿ ‘ಚಾಣಕ್ಯ ಪ್ರಪಂಚ’ ನಾಟಕ ಪ್ರದರ್ಶನವಾಯಿತು. ವೆಂಕಟರಮಣ ಐತಾಳ್ ಅವರು ನಿರ್ದೇಶಿಸಿರುವ ನಾಟಕದಲ್ಲಿ, ರಂಗಾಯಣದ ಈ ಸಾಲಿನ ರೆಪರ್ಟರಿ ಕಲಾವಿದರು ಅಭಿನಯಿಸಿದ್ದರು. ರಂಗಕರ್ಮಿ ಅ.ಚಿ.ಪ್ರಕಾಶ್ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.
ನಾಟಕ, ರೆಸ್ಪಾನ್ಸ್ ಹೇಗಿತ್ತು?
ಎರಡು ಗಂಟೆ ಅವಧಿಯ ನಾಟಕದಲ್ಲಿ ಚಾಣಕ್ಯನ ಚಾಣಾಕ್ಷತನವನ್ನು ಎಳೆ ಎಳೆಯಾಗಿ ಪ್ರಸ್ತುತಪಡಿಸಲಾಗಿದೆ. ಪ್ರಸಕ್ತ ರಾಜಕೀಯ ಸನ್ನಿವೇಶವನ್ನು ನೆನಪಿಗೆ ತರುವ ಸನ್ನಿವೇಶಗಳು ಎದುರಾಗುತ್ತವೆ.

ಮೊದಲ ನಾಟಕಕ್ಕೆ ರಂಗಾಸಕ್ತರಿಂದ ಉತ್ತಮ ಸ್ಪಂದನೆ ಸಿಕ್ಕಿತು. ಕೋವಿಡ್ ನಿಯಮದ ಹಿನ್ನೆಲೆ ಇಬ್ಬರ ನಡುವಿನ ಒಂದು ಸೀಟ್ ಬ್ಲಾಕ್ ಮಾಡಲಾಗಿತ್ತು. ನಿರೀಕ್ಷೆಗೂ ಮೀರಿ ಪ್ರೇಕ್ಷಕರು ಬಂದಿದ್ದರಿಂದ ಅನಿವಾರ್ಯವಾಗಿ ಹಲವರನ್ನು ಹಿಂದೆ ಕಳುಹಿಸಲಾಗಿದೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ ಜವಳಿ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು.
VIDEO REPORT
ಇವತ್ತು ಮತ್ತೊಂದು ಪ್ರದರ್ಶನ
ಚಾಣಕ್ಯ ಪ್ರಪಂಚ ನಾಟಕದ ಎರಡನೆ ಪ್ರದರ್ಶನ ಸೋಮವಾರ ಸಂಜೆ 6 ಗಂಟೆಗೆ ಇರಲಿದೆ ಎಂದು ಸಂದೇಶ ಜವಳಿ ತಿಳಿಸಿದ್ದಾರೆ.
ರಂಗ ಸಮಾಜ ಸದಸ್ಯ ಹಾಲಸ್ವಾಮಿ, ರಂಗಾಯಣದ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()