ಶಿವಮೊಗ್ಗ: ಜಿಲ್ಲೆಯ ಗ್ಯಾಸ್ ಬಂಕ್ಗಳಲ್ಲಿ ಮನಸ್ಸಿಗೆ ಬಂದ ಹಾಗೆ ಸಿಎನ್ಜಿ ದರ (CNG prices) ನಿಗದಿ ಮಾಡಿ ಆಟೋ ಚಾಲಕರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಯಿತು.
ನಿತ್ಯ ಸಿಎನ್ಜಿ ದರ ಏರಿಕೆ ಆಗುತ್ತಲೇ ಇದೆ. ಈ ಬಗ್ಗೆ ಇಲ್ಲಿಯವರೆಗೂ ಸ್ಥಳೀಯ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಆಟೊಗಳ ಎಫ್.ಸಿ ದರ ಮೂರು ಪಟ್ಟು, ಇನ್ಸೂರೆನ್ಸ್ ಮೊತ್ತ, ಬಿಡಿಭಾಗಗಳು, ಮೆಕಾನಿಕ್ ದರ ದುಪ್ಪಟ್ಟು ಏರಿಕೆಯಾಗಿವೆ.
ಇನ್ನೊಂದೆಡೆ ಹಾಲು, ತರಕಾರಿ, ಅಕ್ಕಿ, ದಿನಸಿ ಪದಾರ್ಥ ಸೇರಿ ಪ್ರತಿಯೊಂದರ ದರವೂ ಹೆಚ್ಚಾಗಿದೆ. ಜೀವನ ಮಾಡುವುದು ಕಷ್ಟವಾಗಿದೆ. ಆಟೋ ಚಾಲಕರ ಬದುಕು ದುಸ್ತರವಾಗಿದೆ. ಬಂಕ್ ಗಳಲ್ಲಿ ಬೇಕಾ ಬಿಟ್ಟಿ ಗ್ಯಾಸ್ ದರ ಹೆಚ್ಚಳವಾಗುತ್ತಿರುವುದಕ್ಕೆ ಕಡಿವಾಣ ಹಾಕಿ ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ