ಹಂಸಲೇಖಾಗೆ ಭದ್ರತೆ ಒದಗಿಸುವಂತೆ ಒತ್ತಾಯ, ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರ ಹೇಳಿಕೆ ಬೆಂಬಲಿಸಿ ಮತ್ತು ಬ್ರಾಹ್ಮಣ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ, ದಲಿತರ ಮನೆಗೆ ಬಲಿತರು ಬಂದು ಅಸ್ಪೃಶ್ಯತೆ ಹೋಗಲಾಡಿಸುತ್ತೇವೆ ಎಂಬುದು ಬೂಟಾಟಿಕೆ. ಬಲಿತರ ಮನೆಗೆ ದಲಿತರನ್ನು ಕರೆತಂದು ಅವರಿಗೆ ಊಟ ಬಡಿಸಿ ಅವರ ತಟ್ಟೆ ಲೋಟ ತೊಳೆದು ತಮ್ಮ ತಪ್ಪು ತಿದ್ದಿಕೊಳ್ಳಬೇಕು ಎಂದು ಮಾತನಾಡಿದ್ದರು. ಇದು ಮನಸ್ಸಿಗೆ ಘಾಸಿ ಮಾಡಿದೆ ಎಂದು ಆರೋಪಿಸಿ ಕೆಲವು ಮನುವಾದಿಗಳು, ಹಂಸಲೇಖ ಅವರು ಕ್ಷಮೆ ಕೋರಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ಇದು ಅತ್ಯಂತ ಖಂಡನೀಯ ಎಂದರು.

ಅಂಬೇಡ್ಕರ್ ಕೊಟ್ಟ ಸಂವಿಧಾನ ನಮ್ಮನ್ನು ಸಾಂಸ್ಕೃತಿಕ ಗುಲಾಮಗಿರಿಯಿಂದ ಹೊರಗೆ ತಂದಿದೆ. ನಮ್ಮ ಪ್ರಜಾಪ್ರಭುತ್ವ ಧರ್ಮಾಕ್ರಸಿ ಆಗುತ್ತದೆ ಎನ್ನುವ ಆತಂಕ ಜನಸಾಮಾನ್ಯರಿಗಿದೆ. ಹಾಗೇನಾದರೂ ಆದರೆ ನಾವು ಮತ್ತೆ ಹಿಂದಿನ ಕಾಲಕ್ಕೆ ಹೋಗುವಂತಾಗುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ಉಳಿಸಲು ನಾವು ಎಚ್ಚರದ ಹೆಜ್ಜೆಯನ್ನಿಡಬೇಕಾಗಿದೆ ಎಂದರು.

ಹಂಸಲೇಖ ಅವರ ವಿರುದ್ದ ಹಾಕಿರುವ ಸುಳ್ಳು ಪ್ರಕರಣ ವಜಾಗೊಳಿಸಿ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಶಿವಬಸಪ್ಪ, ಎ.ಅರ್ಜುನ್, ಎಂ.ಏಳುಕೋಟಿ, ರಾಘವೇಂದ್ರ ಜೋಗಿಹಳ್ಳಿ, ಅತ್ತಿಗುಂದ ಕರಿಯಪ್ಪ, ಎಂ. ರವಿ ಹರಿಗೆ, ಎಂ. ರಮೇಶ್ ಚಿಕ್ಕಮರಡಿ ಸೇರಿದಂತೆ ಹಲವರು ಇದ್ದರು.

shivamogga live subscribe band

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment