ಶಿವಮೊಗ್ಗ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಅ. 31ರಿಂದ ನವೆಂಬರ್ 26ರವರೆಗೆ ಬಿಜೆಪಿಯಿಂದ ಏಕತಾಯಾತ್ರೆ (Ekata Yathre) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್, ಏಕತಾಯಾತ್ರೆ ನಿಮಿತ್ತ ಬಿಜೆಪಿ ಜಿಲ್ಲಾ ಘಟಕದಿಂದ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ತ್ರಿವರ್ಣಧ್ವಜ ಹಿಡಿದು ಪ್ರತಿ ದಿನ 8 ರಿಂದ 10 ಕಿ.ಮೀ ನಡೆಯಲಿದ್ದಾರೆ. ಗಿಡ ನೆಟ್ಟು ಗೋಪೂಜೆ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದರು.
ಏಕತಾಯಾತ್ರೆಯ ಸಮಾರೋಪದಲ್ಲಿ ಸರ್ದಾರ್ ಪಟೇಲ್ ಅವರ ಬಗ್ಗೆ ಪ್ರಬಂಧ, ಭಾಷಣ ಸ್ಪರ್ಧೆ ಹಾಗೂ ಏಕತಾ ಪ್ರತಿಮೆಯ ಬಗ್ಗೆ ರೀಲ್ಸ್ ಮಾಡುವ ಸ್ಪರ್ಧೆ ಇರುತ್ತದೆ. ನಶೆಮುಕ್ತ ಭಾರತದ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಸ್ವದೇಶಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಪ್ರಮುಖರಾದ ಮಾಲತೇಶ್, ಪದ್ಮಿನಿರಾವ್, ಹರಿಕೃಷ್ಣ, ಕುಪೇಂದ್ರ, ದರ್ಶನ್, ಸಂತೋಷ್, ಸತೀಶ್ ರಾಮಿನಕೊಪ್ಪ, ಸಂತೋಷ್, ಅಣ್ಣಪ್ಪ, ಚಂದ್ರಶೇಖರ್ ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್ ಎಷ್ಟು? ಇಲ್ಲಿದೆ ಡಿಟೇಲ್ಸ್
Ekata Yathre
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು





