ಶಿವಮೊಗ್ಗ ಚುನಾವಣೆ, ಗೆಲುವಿಗೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಲೆಕ್ಕಾಚಾರ ಹೇಗಿದೆ?

SHIVAMOGGA LIVE NEWS | 26 APRIL 2023

ELECTION NEWS : ಶಿವಮೊಗ್ಗ ವಿಧಾನಸಭೆ ಚುನಾವಣಾ ಕಣ ದಿನಕ್ಕೊಂದು ಅಚ್ಚರಿಯ ತಿರುವು ಪಡೆಯುತ್ತಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ, ಆಯನೂರು ಮಂಜುನಾಥ್‌ ಮತ್ತು ಕೆ.ಬಿ.ಪ್ರಸನ್ನ ಕುಮಾರ್‌ ಅವರು ಜೆಡಿಎಸ್‌ ಸೇರ್ಪಡೆಯಾಗಿರುವುದು, ಇಬ್ಬರು ಪಾಲಿಕೆ ಸದಸ್ಯರು ಪ್ರಮುಖ ಪಕ್ಷಗಳ ಹುರಿಯಾಳುಗಳಾಗಿರುವುದು ಅಖಾಡವನ್ನು ರಂಗೇರಿಸಿದೆ.

Shivamogga-Live-Number-1-Website

Shimoga-Election-News-General-Image

ಹಿಂದುತ್ವದ ಪ್ರಯೋಗ ಶಾಲೆ

ಶಿವಮೊಗ್ಗ ಕ್ಷೇತ್ರ ಹಿಂದುತ್ವದ ಪ್ರಯೋಗ ಶಾಲೆ ಎಂದನಿಸಿಕೊಂಡಿತ್ತು. ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಬಹುದಾಗಿದ್ದ ಕ್ಷೇತ್ರ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆ (ELECTION) ಹಿಂದಿನಂತಿಲ್ಲ. ಒನ್‌ ಸೈಡ್‌ ಆಗಬಹುದಾಗಿದ್ದ ಕ್ಷೇತ್ರದಲ್ಲಿ ಈಗ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಗೆಲುವು, ಸೋಲುಗಳ ಅಂತರ ತೀರ ಕಡಿಮೆ ಇರಲಿದೆ ಎಂದು ಹೇಳಲಾಗುತ್ತಿದೆ.

ತ್ರಿಕೋನ ಸ್ಪರ್ಧಾ ಕಣ

ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರ ಬೆಂಬಲಿಗ, ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ ಅವರು ಬಿಜೆಪಿ ಅಭ್ಯರ್ಥಿ. ರಾಜಕೀಯದ ಜೊತೆಗೆ ಹಿಂದೂ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. ಇದೆ ಕಾರಣಕ್ಕೆ ಅವರು ಗೆಲುವು ಸುಲಭ ಎಂಬುದು ಬಿಜೆಪಿ ಲೆಕ್ಕಾಚಾರ.

ಕಾಂಗ್ರೆಸ್‌ ಪಕ್ಷವು ಯುವ ನಾಯಕ, ಪಾಲಿಕೆ ಸದಸ್ಯ ಹೆಚ್‌.ಸಿ.ಯೋಗೇಶ್‌ ಅವರನ್ನು ಅಖಾಡಕ್ಕಿಳಿಸಿದೆ. ಹೊಸ ಮುಖ, ಪಾಲಿಕೆಯ ಕ್ರಿಯಾಶೀಲ ಸದಸ್ಯ. ಯುವಕರನ್ನು ಸೆಳೆಯುವ ಶಕ್ತಿ ಇದೆ. ಹಾಗಾಗಿ ಅವರು ಗೆಲುವು ಸಾಧಿಸಬಹುದು ಎಂಬುದು ಕಾಂಗ್ರೆಸ್‌ ಲೆಕ್ಕಾಚಾರ.

ಬಿಜೆಪಿ ತೊರೆದಿರುವ ಆಯನೂರು ಮಂಜುನಾಥ್‌ ಅವರು ಜೆಡಿಎಸ್‌ ಪಕ್ಷದ ಅಭ್ಯರ್ಥಿ. ಇದರಿಂದ ಪಕ್ಷಕ್ಕೆ ಹೊಸ ಹರುಪು ಬಂದಿದೆ. ಕಾಂಗ್ರೆಸ್‌ ತೊರೆದ ಕೆ.ಬಿ.ಪ್ರಸನ್ನ ಕುಮಾರ್‌ ಅವರು ಜೆಡಿಎಸ್‌ ಸದಸ್ಯರಾಗಿದ್ದಾರೆ. ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಅವರು ಸ್ವಂತ ಮತ ಬ್ಯಾಂಕ್‌ ಹೊಂದಿದ್ದಾರೆ. ಮೂವರು ಒಗ್ಗೂಡಿರುವುದರಿಂದ ಈ ಬಾರಿ ಗೆಲ್ಲಬಹುದು ಎಂಬ ಲೆಕ್ಕಾಚಾರವಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವರಿಗೆ ಘೆರಾವ್‌, ತಾಂಡಾ ನಿವಾಸಿಗಳಿಂದ ಘೋಷಣೆ

ಮೂರು ಪ್ರಮುಖ ಪಕ್ಷಗಳು ಲಿಂಗಾಯತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಹಾಗಾಗಿ ಈ ಬಾರಿ ಲಿಂಗಾಯತ ಸಮುದಾಯದ ಮತಗಳು ಯಾರ ಪಾಲಿಗೆ ವರವಾಗಲಿದೆ ಎಂಬ ಕುತೂಹಲವು ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 26, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment