ಚೈತ್ರಾ ಕುಂದಾಪುರ ಕೇಸ್‌, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್‌, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 20 SEPTEMBER 2023

SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್‌ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್‌ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್‌ ಕಡೂರ್‌ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು.

ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್‌ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ ಸ್ಥಳ, ಆರೋಪಿಗಳು ಉಳಿದುಕೊಂಡಿದ್ದ ಬಿ.ಹೆಚ್‌. ರಸ್ತೆ ಪಕ್ಕದ ಹೋಟೆಲ್ ಹಾಗೂ ಪ್ರಮುಖ ಕಲ್ಯಾಣಮಂದಿರದ ಬಳಿ ಮಹಜರ್‌ ನಡೆಸಲಾಯಿತು. ಸಿಸಿಬಿ ಇನ್ಸ್‌ಪೆಕ್ಟರ್‌ ಭರತ್ ನೇತೃತ್ವದ ಪೊಲೀಸರ ತಂಡ ಮಹಜರ್‌ ನಡೆಸಿದರು. ಸ್ಥಳದಲ್ಲಿ ಆರೋಪಿ ಗಗನ್‌ ಕಡೂರುನನ್ನು ನಿಲ್ಲಿಸಿ ಫೋಟೊ ತೆಗೆದುಕೊಂಡು ತೆರಳಿದರು.

ಇದನ್ನೂ ಓದಿ – ತೀರ್ಥಹಳ್ಳಿ ಮೂಲದ ಶಂಕಿತ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment