ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020
ದಸರಾ ಹಬ್ಬದ ಹಿನ್ನೆಲೆ ಶಿವಮೊಗ್ಗದ ಸಕ್ರೆಬೈಲು ಆನೆಗಳನ್ನು ಗಜಪೂಜೆಗೆ ಆಹ್ವಾನಿಸಲಾಗಿದೆ. ಮೂರು ಆನೆಗಳು ಗಜಪೂಜೆಯಲ್ಲಿ ಭಾಗವಹಿಸಲಿವೆ.

ಶಿವಮೊಗ್ಗಕ್ಕೆ ಬರುತ್ತವೆ ಮೂರು ಆನೆಗಳು
ಮೆರವಣಿಗೆ ಇಲ್ಲ, ಜಂಬೂ ಸವಾರಿಯು ಇಲ್ಲ. ಆದರೂ ದಸರಾ ಗಜಪೂಜೆಗೆ ಆನೆಗಳನ್ನು ಕರೆಯಿಸಲಾಗುತ್ತಿದೆ. ಅಕ್ಟೋಬರ್ 24ರ ಸಂಜೆ ಮೂರು ಆನೆಗಳು ಶಿವಮೊಗ್ಗಕ್ಕೆ ಬರಲಿವೆ. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆ ಆವರಣದಲ್ಲಿ ಆನೆಗಳಿಗೆ ವ್ಯವಸ್ಥೆ ಮಾಡಾಗಿದೆ ಎಂದು ಮೇಯರ್ ಸುವರ್ಣಾ ಶಂಕರ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು.

ಸಕ್ರೆಬೈಲಿಗೆ ಪಾಲಿಕೆ ತಂಡ
ಆನೆಗಳನ್ನು ಆಹ್ವಾನಿಸುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್ ನೇತೃತ್ವದ ತಂಡ ಇವತ್ತು ಸಕ್ರೆಬೈಲು ಆನೆ ಬಿಡಾರಕ್ಕೆ ತೆರಳಿ, ಆನೆಗಳಿಗೆ ಪೂಜೆ ಸಲ್ಲಿಸಿದರು.
ಪಾಲಿಕೆ ಸದಸ್ಯರಾದ ಪ್ರಭಾಕರ್, ವಿಶ್ವನಾಥ್, ವಿಶ್ವಾಸ್, ಜ್ಞಾನೇಶ್ವರ್, ಶಿವಕುಮಾರ್, ಮಂಜುನಾಥ್, ರಾಹುಲ್, ರಾಜು, ಮಂಜುಳಾ ಶಿವಣ್ಣ, ಅನಿತಾ ರವಿಶಂಕರ್, ಅಧಿಕಾರಿಗಳಾದ ಪ್ರಮೋದ್, ಡಾ.ವಿನಯ್, ಅಕ್ಷತಾ, ಅನುಪಮಾ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















