DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ.
![]() |
ಇಂದು ಮಧ್ಯಾಹ್ನ 2.30ಕ್ಕೆ ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಸುಮಾರು 450 ಕೆ.ಜಿ. ತೂಕದ ಅಂಬಾರಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಭಾಗವಹಿಸಲಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್ ಕುಸಿತ, ಮನೆಗಳು ಜಲಾವೃತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200