ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021
ದಸರಾ ವಿಚಾರದಲ್ಲಿ ಮಹಾನಗರ ಪಾಲಿಕೆ ಮತ್ತೊಂದು ಎಡವಟ್ಟು ಮಾಡಿದೆ. ದಸರಾ ಮೆರವಣಿಗೆಗೆ ಆಗಮಿಸಿದ್ದ ಸಕ್ರೆಬೈಲು ಬಿಡಾರದ ಆನೆಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಅಗೌರವ ತೋರಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
![]() |
ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲು ಬಿಡಾರದ ಸಾಗರ ಮತ್ತು ಭಾನುಮತಿ ಆನೆಗಳಿಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. ಬಳಿಕ ಹಿಂತಿರುಗಿದ್ದವು.
ಇದನ್ನು ಓದಿ | ಶಿವಮೊಗ್ಗ ಜಂಬೂ ಸವಾರಿಗೆ ಎರಡೇ ಆನೆ, ತಾಲೀಮು ಇಲ್ಲದೆ ಅಖಾಡಕ್ಕೆ ಇಳಿಸುತ್ತಿದೆ ಪಾಲಿಕೆ
ಆ ದಿನ ಮಧ್ಯಾಹ್ನವೇ ಆನೆಗಳು ಬಿಡಾರಕ್ಕೆ ಮರಳಿವೆ. ಶಿವಮೊಗ್ಗದಿಂದ ಸಕ್ರೆಬೈಲು ಬಿಡಾರದವರೆಗೂ ಆನೆಗಳು ನಡೆದುಕೊಂಡೇ ಹೋಗಿವೆ. ದಸರಾ ಹಿನ್ನೆಲೆ ಆನೆಗಳಿಗೆ ಹಚ್ಚಲಾಗಿದ್ದ ಬಣ್ಣವು ಹಾಗೆ ಇತ್ತು. ಆನೆಗಳು ನಡೆದು ಹೋಗುತ್ತಿರುವ ದೃಶ್ಯವನ್ನು ಪರಿಸರವಾದಿಗಳ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪ್ರತಿ ಭಾರಿ ಶಿವಮೊಗ್ಗ ದಸರಾದ ಅಂಬಾರಿ ಹೊರಲು ಸಕ್ರೆಬೈಲು ಬಿಡಾರದಿಂದ ಆನೆಗಳನ್ನು ಕರೆಸಲಾಗುತ್ತದೆ. ಜಂಬೂ ಸವಾರಿ ಮರುದಿನ ಮಾವುತ, ಕಾವಾಡಿ, ಬಿಡಾರದ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಆನೆಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತಿತ್ತು. ಆದರೆ ಈ ಭಾರಿ ಅಂತಹ ಪರಿಪಾಠವಿಲ್ಲದಾಗಿದೆ.
ಆನೆಗಳನ್ನು ಲಾರಿಯಲ್ಲಿ ಕರೆಸಿ, ಲಾರಿ ಮೂಲಕವೇ ಕಳುಹಿಸಲಾಗುತಿತ್ತು. ಆದರೆ ಈ ಭಾರಿ ಹವೇ ರಸ್ತೆಯಲ್ಲಿ ಆನೆಗಳು ನಡೆದುಕೊಂಡೇ ಬಂದು, ನಡೆದುಕೊಂಡೇ ಬಿಡಾರಕ್ಕೆ ಮರಳಿವೆ. ಆನೆಗಳಿಗೆ ಯಾವುದೆ ರಕ್ಷಣೆ ಒದಗಿಸದೆ ಹೈವೇ ರಸ್ತೆಯಲ್ಲಿ ಕಳುಹಿಸಲಾಗಿದೆ. ಇದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಪಾಲಿಕೆ ಮತ್ತು ಅರಣ್ಯ ಇಲಾಖೆ ವಿರುದ್ಧ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200