DASARA NEWS, 5 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ (Elephants) ಆಗಮಿಸಿರುವ ಸಕ್ರೆಬೈಲು ಬಿಡಾರದ ಆನೆಗಳಿಗೆ ತಾಲೀಮು ಆರಂಭವಾಗಿದೆ. ಇವತ್ತು ಬೆಳಗ್ಗೆಯಿಂದಲೇ ನಗರದ ರಸ್ತೆಗಿಳಿದ ಆನೆಗಳು ಮೆರವಣಿಗೆ ಸಾಗುವ ಹಾದಿಯಲ್ಲಿ ಕ್ರಮಿಸಿದವು.
ಸಕ್ರೆಬೈಲು ಬಿಡಾರದ ಸಾಗರ, ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ತಾಲೀಮು ನಡೆಸಿದವು. ವಾಸವಿ ಶಾಲೆಯಿಂದ ಹೊರಟ ಆನೆಗಳು ಕೋಟೆ ರಸ್ತೆ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರೂ ರಸ್ತೆ, ದುರ್ಗಿಗುಡಿ, ಜೈಲ್ ರೋಡ್ ಮೂಲಕ ಫ್ರೀಡಂ ಪಾರ್ಕ್ವರೆಗೆ ತೆರಳಿ ಹಿಂತಿರುಗಿದವು.
ವಾಹನ, ಜನದಟ್ಟಣೆ ಕಡಿಮೆ ಇರುವುದು ಮತ್ತು ಆನೆಗಳಿಗೆ ನಗರದ ಗಿಜಿಗುಡುವ ವಾತಾವರಣಕ್ಕೆ ಹೊಂದಾಣಿಕೆ ಮಾಡಿಸುವ ಸಲುವಾಗಿ ಬೆಳಗ್ಗೆ ತಾಲೀಮು ನಡೆಸಲಾಗಿದೆ. ಆನೆಗಳು ಸಾಗುವ ಹಾದಿಯಲ್ಲಿ ಜನರ ನಿಯಂತ್ರಣಕ್ಕೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿತ್ತು. ಕಳೆದ ರಾತ್ರಿ ಆನೆಗಳು ಸಕ್ರೆಬೈಲು ಬಿಡಾರದಿಂದ ಶಿವಮೊಗ್ಗಕ್ಕೆ ಆಗಮಿಸಿವೆ.
ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೆಲ್ಲ ಕಾರ್ಯಕ್ರಮವಿದೆ? ಇಲ್ಲಿದೆ ಲಿಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200