ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
ಶಿವಮೊಗ್ಗ – ಭದ್ರಾವತಿ ಅವಳಿ ನಗರದ ನಡುವೆ ಬಸ್ ಸಂಚಾರ ಪುನಾರಂಭವಾಗಿದೆ. ಆದರೆ ಪ್ರಯಾಣಿಕರು ಮತ್ತು ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಇನ್ನು, ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?
ಬೆಳಗ್ಗೆಯಿಂದ ಸಂಚಾರ ಆರಂಭ
ಸಾರಿಗೆ ನೌಕರರ ಮುಷ್ಕರದ ನಡುವೆಯು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಬಸ್ ಸಂಚಾರ ಆರಂಭವಾಗಿದೆ. ಬೆಳಗ್ಗೆಯಿಂದ ಎರಡು ಬಸ್ಗಳು ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಭಾನುವಾರ ಮತ್ತು ಮುಷ್ಕರದ ಕಾವು ಇನ್ನು ತಗ್ಗದೆ ಇರುವ ಹಿನ್ನೆಲೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಎರಡು ಬಸ್ಸುಗಳನ್ನು ಮಾತ್ರ ಬಿಡಲಾಗಿದೆ. ಈ ನಡುವೆ ದಾವಣಗೆರೆ ಜಿಲ್ಲೆಯ ಹರಿಹರಕ್ಕೂ ಶಿವಮೊಗ್ಗದಿಂದ ಒಂದು ಬಸ್ ಹೋಗಿದೆ.
ಬಿಗಿ ಭದ್ರತೆಯಲ್ಲಿ ಸಂಚಾರ
ಮಾಚೇನಹಳ್ಳಿ ಬಳಿ ಬಸ್ಗೆ ಕಲ್ಲು ತೋರಿದ್ದರಿಂದ ಗಾಜು ಪುಡಿ ಪುಡಿಯಾಗಿತ್ತು. ಹಾಗಾಗಿ ಈಗ ಶಿವಮೊಗ್ಗ ಭದ್ರಾವತಿ ನಡುವೆ ಸಂಚರಿಸುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಕೆಎಸ್ಆರ್ಟಿಸಿ ಸಿಬ್ಬಂದಿಗಳನ್ನು ಒಳಗೊಂಡ ತಂಡ ಪ್ರತಿ ಬಸ್ಗೆ ಜೀಪ್ನಲ್ಲಿ ಎಸ್ಕಾರ್ಟ್ ಮಾಡುತ್ತಿದೆ. ಬಸ್ಸುಗಳು ಮತ್ತು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾರು ಚೇಸ್ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

- ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

- ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

- ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು
















