ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020
➤ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ – ಭದ್ರಾವತಿ ಅವಳಿ ನಗರದ ನಡುವೆ ಬಸ್ ಸಂಚಾರ ಪುನಾರಂಭವಾಗಿದೆ. ಆದರೆ ಪ್ರಯಾಣಿಕರು ಮತ್ತು ಬಸ್ಸುಗಳ ಸಂಖ್ಯೆ ಕಡಿಮೆ ಇದೆ. ಇನ್ನು, ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

ಇದನ್ನೂ ಓದಿ  | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?

ಬೆಳಗ್ಗೆಯಿಂದ ಸಂಚಾರ ಆರಂಭ

ಸಾರಿಗೆ ನೌಕರರ ಮುಷ್ಕರದ ನಡುವೆಯು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಬಸ್ ಸಂಚಾರ ಆರಂಭವಾಗಿದೆ. ಬೆಳಗ್ಗೆಯಿಂದ ಎರಡು ಬಸ್‍ಗಳು ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಭಾನುವಾರ ಮತ್ತು ಮುಷ್ಕರದ ಕಾವು ಇನ್ನು ತಗ್ಗದೆ ಇರುವ ಹಿನ್ನೆಲೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಎರಡು ಬಸ್ಸುಗಳನ್ನು ಮಾತ್ರ ಬಿಡಲಾಗಿದೆ. ಈ ನಡುವೆ ದಾವಣಗೆರೆ ಜಿಲ್ಲೆಯ ಹರಿಹರಕ್ಕೂ ಶಿವಮೊಗ್ಗದಿಂದ ಒಂದು ಬಸ್ ಹೋಗಿದೆ.

ಬಿಗಿ ಭದ್ರತೆಯಲ್ಲಿ ಸಂಚಾರ

ಮಾಚೇನಹಳ್ಳಿ ಬಳಿ ಬಸ್‍ಗೆ ಕಲ್ಲು ತೋರಿದ್ದರಿಂದ ಗಾಜು ಪುಡಿ ಪುಡಿಯಾಗಿತ್ತು. ಹಾಗಾಗಿ ಈಗ ಶಿವಮೊಗ್ಗ ಭದ್ರಾವತಿ ನಡುವೆ ಸಂಚರಿಸುವ ಬಸ್ಸುಗಳಿಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳನ್ನು ಒಳಗೊಂಡ ತಂಡ ಪ್ರತಿ ಬಸ್‍ಗೆ ಜೀಪ್‍ನಲ್ಲಿ ಎಸ್ಕಾರ್ಟ್ ಮಾಡುತ್ತಿದೆ. ಬಸ್ಸುಗಳು ಮತ್ತು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ವಿಡಿಯೋ ರಿಪೋರ್ಟ್ ಇಲ್ಲಿದೆ

 

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

Leave a Comment