ಪ್ರತಿಭಟನಾ ಸ್ಥಳದಲ್ಲಿ ಎಸ್‌.ಪಿ ವಿರುದ್ಧ ಈ‍ಶ್ವರಪ್ಪ ಗರಂ, ಸುಮೋಟೊ ಪ್ರಕರಣ ನೆನಪಿಸಿ ತರಾಟೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ತರಾಟೆಗೆ (Angry) ತೆಗೆದುಕೊಂಡರು.

ಜಿಲ್ಲಾಧಿಕಾರಿ ಕಚೇರಿ ಎದುರು ರಾಷ್ಟ್ರಭಕ್ತರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಆಗಮಿಸಿದ್ದರು. ಈ ಸಂದರ್ಭ ಕೆರಳಿದ ಈಶ್ವರಪ್ಪ, ತಮ್ಮ ವಿರುದ್ಧದ ಸುಮೋಟೊ ಪ್ರಕರಣವನ್ನು ಉಲ್ಲೇಖಿಸಿ ಜಿಲ್ಲಾ ರಕ್ಷಣಾಧಿಕಾರಿಯನ್ನ ತರಾಟೆಗೆ ತೆಗೆದುಕೊಂಡರು.

ದನ ಕಾಯೋಕೆ ಬಂದಿದ್ದೇವಾ?ʼ

Eshwarappa-Angry-against-Shimoga-SP-Mithun-Kumar.

‘ನಿಮ್ಮ ಇಲಾಖೆ ಬದುಕಿದೆಯೋ ಇಲ್ಲವೊ ಗೊತ್ತಿಲ್ಲ. ರೈಲ್ವೆ ಇಲಾಖೆಯ ಕಂಬಿ ತಂದು ಮೈದಾನಕ್ಕೆ ಬೇಲಿ ಹಾಕಿದ್ದರು. ಅವರನ್ನು ಈತನಕ ಬಂಧಿಸಿಲ್ಲ. ಮತ್ಯಾಕೆ ನೀವು ಎಸ್‌.ಪಿ ಆಗಿದ್ದೀರ? ನಾವೇನು ಇಲ್ಲಿ ದನ ಕಾಯೋಕೆ ಬಂದಿದ್ದೇವಾ? ಈ ಹಿಂದೆ ನಾನು ಭಾಷಣ ಮಾಡಿದ್ದಕ್ಕೆ ಪ್ರಕರಣ ದಾಖಲಿಸಿದ್ದೀರಿ. ಆಗ ಯಾರಾದರು ನಿಮಗೆ ದೂರು ನೀಡಿದ್ದರಾ? ಆದ್ದರಿಂದ ಕೂಡಲೆ ಕ್ರಮ ಕೈಗೊಳ್ಳಬೇಕುʼ ಎಂದು ಈ‍ಶ್ವರಪ್ಪ ಆಗ್ರಹಿಸಿದರು. ಆಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಮನವಿ ನೀಡುವಂತೆ ತಿಳಿಸಿದರು. ಇದರಿಂದ ಕೆರಳಿದ ಈಶ್ವರಪ್ಪ, ‘ಮನವಿ ಕೊಡಬೇಕು ಎಂದು ನೀವು ಹೇಳಬೇಕ? ನಿಮಗೆ ಕಣ್ಣು ಕಾಣುವುದಿಲ್ಲವೆ?ʼ ಎಂದು ಪ್ರಶ್ನಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment