‘ನಿನ್ನೆಯಿಂದ ವಿಡಿಯೋ ಹರಿಬಿಟ್ಟು ಅಪಪ್ರಚಾರ’, ಈಶ್ವರಪ್ಪ ಆರೋಪ, ಏನದು ವಿಡಿಯೋ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 MAY 2024

ELECTION NEWS : ಲೋಕಸಭೆ ಚುನಾವಣೆಯಲ್ಲಿ ತಾವು ಗೆಲ್ಲಬಹುದು ಎಂಬ ಕಾರಣಕ್ಕೆ ತಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಈ‍ಶ್ವರಪ್ಪ, ಈ ಹಿಂದೆ ರಾಘವೇಂದ್ರ ಪರ ಪ್ರಚಾರ ಮಾಡಿದ್ದ ವಿಡಿಯೋವನ್ನು ಈಗ ವೈರಲ್‌ ಮಾಡಲಾಗುತ್ತಿದೆ. ತಮಗೆ ಜನ ಬೆಂಬಲ ವ್ಯಕ್ತವಾಗುತ್ತಿದ್ದಂತೆಯೇ ಈ ರೀತಿ ಅಪ ಪ್ರಚಾರ ನಡೆಸಲಾಗುತ್ತಿದೆ. ಇದು ನೀಚತನದ ರಾಜಕೀಯ ಷಡ್ಯಂತ್ರ. ಆದರೆ ತಾವು ಯಾವುದೇ ಕಾರಣಕ್ಕೂ ಚುನಾವಣ ಕಣದಿಂದ ಹಿಂದಕ್ಕೆ ಸರಿದಿಲ್ಲ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು, ಎಲ್ಲ ವರ್ಗದ ಜನರು ತಮ್ಮೊಂದಿಗೆ ಇದ್ದಾರೆ. ಆದ್ದರಿಂದ ಈ ಬಾರಿ ತಾನು ಗೆಲ್ಲುತ್ತೇನೆ ಎಂಬ ಈ‍ಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು, ಈಶ್ವರಪ್ಪ, ಪತ್ನಿ ಜಯಲಕ್ಷ್ಮಿ, ಪುತ್ರ ಕೆ.ಈ.ಕಾಂತೇಶ್‌ ಸೇರಿದಂತೆ ಕುಟುಂಬದ ಸದಸ್ಯರ ಜೊತೆಗೆ ತೆರಳಿ ಮತದಾನ ಮಾಡಿದರು. 

ಇದನ್ನೂ ಓದಿ – ಶಿವಮೊಗ್ಗದಲ್ಲಿ ವೋಟ್‌ ಹಾಕಿದರೆ ಸಿಗುತ್ತೆ ಸಿಂಹಾಸನ, ಕಿರೀಟ, ರಾಜ ಪೋಷಾಕಿನಲ್ಲಿ ಕಂಗೊಳಿಸ್ತಿದ್ದಾರೆ ಸಿಬ್ಬಂದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment