ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಸ್ಥಿತಿ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು (Criticize).
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಖಂಡಿಸಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ರಾಷ್ಟ್ರಭಕ್ತರ ಬಳಗ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಮಾತನಾಡಿದರು.
ಈಶ್ವರಪ್ಪ ಏನೇನೆಲ್ಲ ಹೇಳಿದರು? ಇಲ್ಲಿದೆ 4 ಪಾಯಿಂಟ್ಸ್
ಮುಂದೆ ಮುಸ್ಲಿಂ ಬೆಂಬಲಿತ ಸರ್ಕಾರ ತರುವ ಉದ್ದೇಶದಿಂದ ವಸತಿ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ಶೇ.15ರಷ್ಟು ಮೀಸಲಾತಿ ಬಿಲ್ ಪಾಸ್ ಮಾಡಲು ಬಿಡಲ್ಲ ಎಂದರು.
ಮುಸ್ಲಿಮರ ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದಾರೆ. ಹಿಂದೂ ಹೆಣ್ಮಕ್ಕಳ ಮದುವೆಗೆ ಒಂದು ರುಪಾಯಿಯನ್ನು ನೀಡಿಲ್ಲ. ಮುಸ್ಲಿಮರ ಮಕ್ಕಳ ಮದರಸಾಗಳಿಗೆ ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಮಕ್ಕಳು ಓದುತ್ತಿರುವ ಸರ್ಕಾರಿ ಶಾಲೆಗಳು ಸೋರುತ್ತಿವೆ.

ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತು ಹಿಂದುಗಳನ್ನು ತುಳಿಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಣ್ಣು ಇಲ್ಲ, ಹೃದಯವು ಇಲ್ಲ ಎಂದು ಟೀಕಿಸಿದರು. ಇದೇ ಮಾದರಿ ತಾತ್ಸಾರ ಮುಂದುವರೆದರೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ಎಚ್ಚರಿಸಿದರು.
ನರೇಂದ್ರ ಮೋದಿ ವಿಶ್ವನಾಯಕ. ಆದರೆ ಸಿದ್ದರಾಮಯ್ಯ ಪಾಕಿಸ್ತಾನದ ನಾಯಕ. ಅಲ್ಲಿಯ ಟಿವಿಗಳಲ್ಲು ಅವರೆ ಕಾಣಿಸುತ್ತಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಜಾಗದಲ್ಲಿ ಔರಂಗಜೇಬ್ ಪ್ರತಿಮೆ ಬರಬಹುದು ಎಂದರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಶಿವಪ್ಪನಾಯಕ ಪ್ರತಿಮೆವರೆಗು ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಪ್ರಮುಖರಾದ ಶೇಷಾಚಲ, ರಮೇಶ್ ಬಾಬು, ಸುವರ್ಣ ಶಂಕರ್, ಮೋಹನ್ ಜಾದವ್, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ್ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್ ಪರಿಶೀಲಿಸಿದ ಪೊಲೀಸ್, ಚಾಲಕನಿಗೆ ಕಾದಿತ್ತು ಶಾಕ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





