ಶಿವಮೊಗ್ಗ ಲೈವ್.ಕಾಂ | SHIMOGA | 28 ಸೆಪ್ಟೆಂಬರ್ 2019

ಶರಾವತಿ ಕಣಿವೆಯ ಭೂಗರ್ಭದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಯೋಜಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿದ್ಯುತ್ ಉತ್ಪಾದನೆ ಯೋಜನೆಗೆ ಯಾರು ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
![]() |

ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಿಷ್ಟು
ಅರಣ್ಯ ನಾಶವಾಗುತ್ತದೆ ಎಂದು ವಿದ್ಯುತ್ ನಿಲ್ಲಿಸಲು ಸಾಧ್ಯವಿಲ್ಲ. ಹಾಗೆಯೆ ವಿದ್ಯುತ್ ಉತ್ಪಾದನೆಗಾಗಿ ಅರಣ್ಯ ನಾಶ ಮಾಡುವುದು ಸರಿಯಲ್ಲ. ಅರಣ್ಯ ನಾಶವು ಆಗಬಾರದು. ವಿದ್ಯುತ್ ಉತ್ಪಾದನೆಯು ಆಗಬೇಕು. ಈ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚಿಸಿ ಬಳಿಕ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.
ದೇಶಾದ್ಯಂತ ಹಲವು ಗ್ರಾಮಗಳು ಕಗ್ಗತ್ತಲಲ್ಲಿ ಇದ್ದಾವೆ. ದೀಪದ ಕೆಳಗೆ ಕತ್ತಲು ಎಂಬಂತೆ ಶರವಾತಿ ಮುಳುಗಡೆ ಸಂತ್ರಸ್ತರು ವಿದ್ಯುತ್ ಇಲ್ಲ. ಹಾಗಾಗಿ ವಿದ್ಯುತ್ ಉತ್ಪಾದನೆಗೆ ಯಾರೂ ಅಡ್ಡಿಪಡಿಸಬಾರದು ಎಂದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200