ಶಿವಮೊಗ್ಗ ಲೈವ್.ಕಾಂ | SHIMOGA | 28 ಸೆಪ್ಟೆಂಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶರಾವತಿ ಕಣಿವೆಯ ಭೂಗರ್ಭದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಯೋಜಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿದ್ಯುತ್ ಉತ್ಪಾದನೆ ಯೋಜನೆಗೆ ಯಾರು ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಿಷ್ಟು
ಅರಣ್ಯ ನಾಶವಾಗುತ್ತದೆ ಎಂದು ವಿದ್ಯುತ್ ನಿಲ್ಲಿಸಲು ಸಾಧ್ಯವಿಲ್ಲ. ಹಾಗೆಯೆ ವಿದ್ಯುತ್ ಉತ್ಪಾದನೆಗಾಗಿ ಅರಣ್ಯ ನಾಶ ಮಾಡುವುದು ಸರಿಯಲ್ಲ. ಅರಣ್ಯ ನಾಶವು ಆಗಬಾರದು. ವಿದ್ಯುತ್ ಉತ್ಪಾದನೆಯು ಆಗಬೇಕು. ಈ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚಿಸಿ ಬಳಿಕ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.
ದೇಶಾದ್ಯಂತ ಹಲವು ಗ್ರಾಮಗಳು ಕಗ್ಗತ್ತಲಲ್ಲಿ ಇದ್ದಾವೆ. ದೀಪದ ಕೆಳಗೆ ಕತ್ತಲು ಎಂಬಂತೆ ಶರವಾತಿ ಮುಳುಗಡೆ ಸಂತ್ರಸ್ತರು ವಿದ್ಯುತ್ ಇಲ್ಲ. ಹಾಗಾಗಿ ವಿದ್ಯುತ್ ಉತ್ಪಾದನೆಗೆ ಯಾರೂ ಅಡ್ಡಿಪಡಿಸಬಾರದು ಎಂದರು.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






