ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021
ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಗಡಿ ಕ್ಯಾತೆ ತೆಗೆದಿರುವ ಬೆನ್ನಿಗೆ, ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಅಲ್ಲದೆ ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಪ್ರಾಂತ್ಯಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ. ಹಾಗನ್ನುವುದಾದರೆ ಕನ್ನಡ ಭಾಷಿಕರು ಮಹಾರಾಷ್ಟ್ರದಾದ್ಯಂತ ಇದ್ದಾರೆ. ಮಹಾರಾಷ್ಟ್ರವನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಹೇಳಲು ಆಗುತ್ತದೆಯೆ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ, ಕೇರಳ, ಆಂಧ್ರದ ಜೊತೆ ಕರ್ನಾಟಕ ಗಡಿ ಹಂಚಿಕೊಂಡಿದೆ. ಎಲ್ಲರೊಂದಿಗೂ ಸೌಹಾರ್ದಯುತ ವಾತಾವರಣವಿದೆ. ಆದರೆ ಮಹಾರಾಷ್ಟ್ರದಲ್ಲಿ ಕೆಲವರು ಭೂಮಿ, ನೀರಿನ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಹಾಗೆ ಮಾಡಿದರೆ ಅವರ ಪಕ್ಷಕ್ಕೆ, ಅವರಿಗೆ ಹೆಚ್ಚು ಮತ ಸಿಗಲಿದೆ ಎಂಬ ನಂಬಿಕೆಯಲ್ಲಿದ್ದಾರೆ. ಹಾಗೆ ಹೇಳಿದಾಕ್ಷಣ ಅವರಿಗೆ ಭೂಮಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಮತ್ತೊಂದೆಡೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






