ರಾಜೀನಾಮೆ ಬಳಿಕ ಮುಂದೇನು, ಕಾರ್ಯಕರ್ತರ ಸಭೆಯಲ್ಲಿ ಪ್ಲಾನ್ ಬಿಚ್ಚಿಟ್ಟ ಈಶ್ವರಪ್ಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 15 ಏಪ್ರಿಲ್ 2022

ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಈಶ್ವರಪ್ಪ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ಅಭಿಮಾನಿಗಳು ರಾಜೀನಾಮೆ ಸಲ್ಲಿಸದಂತೆ ಈಶ್ವರಪ್ಪ ಅವರಿಗೆ ಆಗ್ರಹಿಸಿದರು. ಈ ವೇಳೆ ಕಾರ್ಯಕರ್ತರು, ಅಭಿಮಾನಿಗಳನ್ನು ಸಮಧಾನ ಪಡಿಸಿ ಬೆಂಗಳೂರಿತ್ತ ಪ್ರಯಾಣ ಆರಂಭಿಸಿದರು.

ಬಿಜೆಪಿ ಕಚೇರಿಯಿಂದ ಸಚಿವ ಈಶ್ವರಪ್ಪ ಅವರು ಬೆಂಗಳೂರಿಗೆ ಪ್ರಯಾಣ ಆರಂಭಿಸಿದರು. ಸಚಿವ ಈಶ್ವರಪ್ಪ ಅವರ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಅವರೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ. ನಿಗದಿಯಂತೆ ಇವತ್ತು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈಶ್ವರಪ್ಪ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ.

ಕಣ್ಣೀರಿಟ್ಟ ಮಹಿಳೆಯರು

ಇದಕ್ಕೂ ಮುನ್ನ ಬಿಜೆಪಿ ಕಚೇರಿಗೆ ಆಗಮಿಸಿದ ಸಚಿವ ಈಶ್ವರಪ್ಪ ಅವರನ್ನು ಮಹಿಳಾ ಅಭಿಮಾನಿಗಳು ಸುತ್ತುವರೆದರು. ರಾಜೀನಾಮೆ ಕೊಡಬೇಡಿ ಎಂದು ಮನವಿ ಮಾಡಿದರು. ಕೆಲವು ಮಹಿಳೆಯರು ಈಶ್ವರಪ್ಪ ಅವರ ಮುಂದೆ ಕಣ್ಣೀರು ಹಾಕಿದರು. ರಾಜೀನಾಮೆ ಕೊಡಬಾರದು ಎಂದು ಘೋಷಣೆ ಕೂಗಿದರು.

ಮತ್ತೆ ಮಂತ್ರಿಯಾಗಿ ಬರುತ್ತೇನೆ

ಈ ಸಂದರ್ಭ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಈಗ ನನ್ನ ಮೇಲೆ ಒಂದು ಆರೋಪ ಹೊರೆಸಿದ್ದಾರೆ. ನಾನು ಮಂತ್ರಿಯಾಗಿದ್ದರೆ ತನಿಖೆ ಮೇಲೆ ಪ್ರಭಾವ ಉಂಟಾಗಲಿದೆ ಅನ್ನುವ ಭಾವನೆ ಇರುತ್ತದೆ. ಅದಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಿರ್ದೋಷಿಯಾಗಿ ಬರುತ್ತೇನೆ. ಮತ್ತೆ ಮಂತ್ರಿ ಆಗಿಯೇ ಆಗುತ್ತೇನೆ ಎಂದು ತಿಳಿಸಿದರು.

ಮೆಲ್ಪಂಕ್ತಿ ಹಾಕಿಕೊಟ್ಟಿದ್ದಾನೆ ಅನಿಸಬೇಕು

ಪ್ರತಿ ವ್ಯಕ್ತಿಗೂ ಪರೀಕ್ಷೆಯ ಸಮಯ ಬರುತ್ತದೆ. ಷಡ್ಯಂತ್ರ ನಡೆಸಿದವರು ಇವತ್ತು ತಾವು ಯಶಸ್ವಿಯಾಗಿದ್ದೇವೆ ಅಂದುಕೊಂಡಿರಬಹುದು. ನನ್ನನ್ನು ಬೆಳೆಸಿದ್ದು ನಮ್ಮ ಸಂಘಟನೆ ಮತ್ತು ಪರಿವಾರದ ನಾಯಕರು. ಒಬ್ಬ ಕಾರ್ಯಕರ್ತ ತನ್ನ ಮೇಲೆ ಆರೋಪ ಬಂದಾಗ ಆ ಸ್ಥಾನದಲ್ಲಿ ಇರುವುದಿಲ್ಲ ಅಂತಾ ತೋರಿಸಿದ್ದೇನೆ. ಈ ಮೇಲ್ಪಂಕ್ತಿ ಹಾಕಿಕೊಟ್ಟು ಉಳಿದ ಕಾರ್ಯಕರ್ತರಿಗೆ ಮಾದರಿಯಾಗಬೇಕು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಈಶ್ವರಪ್ಪ ತಿಳಿಸಿದರು.

ಹಿಂದೆಯು ರಾಜೀನಾಮೆ ಕೊಟ್ಟಿದ್ದೆ

ಈ ಹಿಂದೆ ಇಂಧನ ಖಾತೆ ಸಚಿವನಾಗಿದ್ದೆ. ರಾಜೀನಾಮೆ ನೀಡಬೇಕು ಎಂದು ಸಂಘಟನೆ ಸೂಚನೆ ನೀಡಿತು. ಒಂದು ನಿಮಿಷವು ಯೋಚನೆ ಮಾಡದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಪರ್ವ ಕಾಲ ಪಕ್ಷದ ಅಧ್ಯಕ್ಷನಾಗು ಎಂದು ಹಿರಿಯರು ಸೂಚನೆ ನೀಡಿದರು. ಅದರಂತೆ ನಾನು ಬಿಜೆಪಿ ರಾಜ್ಯಾಧ್ಯಕ್ಷನಾದೆ. ನಾನು ರಾಜ್ಯದ ಹಿರಿಯರಿಗೆ, ಮಠಾಧೀಶರಿಗೆ, ಜನರಿಗೆ ಇಷ್ಟೊಂದು ಪ್ರೀತಿಪಾತ್ರನಾಗಿದ್ದೇನಾ ಎಂದು ಈ ನಾಲ್ಕೈದು ದಿನದಲ್ಲಿ ನನಗೆ ಆಶ್ಚರ್ಯವಾಯಿತು. ಅನೇಕ ಕಡೆಯಿಂದ ಕರೆಗಳು ಬರುತ್ತಿವೆ ಎಂದರು.

ಅಳುತ್ತಾ ಕಳಿಹಿಸಿಕೊಡಬೇಡಿ

ಇಲ್ಲಿರುವ ಮಹಿಳೆಯರು ಅಳುತ್ತಿದ್ದಾರೆ. ಹೀಗೆ ಅಳುತ್ತ ಕಳುಹಿಸಬೇಡಿ. ಸಂತೋಷದಿಂದ ಕಳುಹಿಸಬೇಕು. ನನ್ನ ಮೇಲೆ ಬಂದಿರುವ ಆರೋಪದಿಂದ ನಾನು ಮುಕ್ತವಾಗಿ ಬಂದರೆ ಎಲ್ಲರಿಗೂ ಸಂತೋವಾಗುತ್ತದೆ. ಮುಖ್ಯಮಂತ್ರಿಯವರು ತನಿಖೆಗೆ ಸೂಚಿಸಿದ್ದಾರೆ. ಆ ಪ್ರಕಾರವಾಗಿ ತನಿಖೆ ನಡೆಯುತ್ತಿದೆ ಎಂದು ಈಶ್ವರಪ್ಪ ತಿಳಿಸಿದರು.

ಪ್ರಕರಣದಿಂದ ಹೊರ ಬರುತ್ತೇನೆ

ಮೂರು ದಿನದ ಕೆಳಗೆ ರಾಜೀನಾಮೆ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ತಿಳಿಸಿದೆ. ಆದರೆ ಸ್ವಲ್ಪ ತಾಳ್ಮೆ ವಹಿಸುವಂತೆ ಅವರು ಸೂಚಿಸಿದರು. ನಮ್ಮ ರಾಷ್ಟ್ರೀಯ ನಾಯಕರು, ಹಿರಿಯರ ಜೊತೆಗೆ ಮಾತನಾಡಿದೆ. ಒಂದೆರಡು ದಿನ ರಾಜೀನಾಮೆ ಕೊಡಬೇಡ ಎಂದು ಹೇಳಿದರು. ನಿನ್ನೆ ಕೇಳಿದಾಗ ಒಪ್ಪಿಗೆ ಸೂಚಿಸಿದರು. ಈ ಪ್ರಕರಣದಿಂದ ಹೊರ ಬರುತ್ತೇನೆ ಎಂಬ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಅಗ್ನಿಪರೀಕ್ಷೆ ಬರುತ್ತೆ ಅಂದುಕೊಂಡಿರಲಿಲ್ಲ

ಇಂತಹ ಅಗ್ನಿಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಈ ಅಗ್ನಿಪರೀಕ್ಷೆಯಲ್ಲಿ ಯಶಸ್ವಿಯಾಗಿ ಹೊರಗೆ ಬರುತ್ತೇನೆ. ಜೀವ ಇರುವ ತನಕ ಸಂಘಟನೆ ಮೂಲಕ ದೇಶದ ಕೆಲಸವನ್ನು ಮಾಡುತ್ತೇನೆ. ರಾಷ್ಟ್ರಭಕ್ತಿಯನ್ನು ಹೆಚ್ಚಿಸೋಣ, ಹಿಂದೂಗಳ ಮೇಲಿನ ದೌರ್ಜನ್ಯ ತಡೆಯೋಣ ಎಂದು ತಿಳಿಸಿದರು.

ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಟೈರ್’ಗೆ ಬೆಂಕಿ ಹಚ್ಚಿ ಆಕ್ರೋಶ

ಸಭೆ ಬಳಿಕ ಸಚಿವ ಕೆ.ಎಸ್.ಈಶ್ವರಪ್ಪ ಅವರು ದೊಡ್ಡ ಸಂಖ್ಯೆ ಬೆಂಬಲಿಗರೊಂದಿಗೆ ಬೆಂಗಳೂರಿಗೆ ತೆರಳಿದರು. ಇಂದು ಸಂಜೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಇದನ್ನೂ ಓದಿ | ಕಣ್ಣೀರು ಹಾಕುತ್ತ ಈಶ್ವರಪ್ಪ ಸುತ್ತುವರಿದ ಮಹಿಳೆಯರು

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment