
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸರ್ಕಾರ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಫೋನ್ ಟ್ಯಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾ. ಅವರು ಏನು ಕಡಿದು ಗುಡ್ಡೆ ಹಾಕಿದ್ದಾರೆ ಎಂದು ಅವರ ಫೋನ್ ಟ್ಯಾಪ್ ಮಾಡಬೇಕಿದೆ. ಇದೆಲ್ಲ ಪ್ರಚಾರ ತಂತ್ರ. ಈ ಮೂಲಕ ದೊಡ್ಡವರಾಗೋಕೆ ಪ್ರಯತ್ನಿಸುತ್ತಿದ್ದಾರೆ. ಅವರ ಫೋನ್ ಟ್ಯಾಪ್ ಆಗುತ್ತಿಲ್ಲ. ಅವರದ್ದು ಅರ್ಥವಿಲ್ಲದ ಹೇಳಿಕೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು.
ಒಡೆದ ಕನ್ನಡಿ ಮತ್ತೆ ಸೇರೋಕೆ ಆಗಲ್ಲ
ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಂತೆ ಆಗಿದೆ. ಪಕ್ಷದ ನಾಯಕರ ವಿರುದ್ಧ ಹಿರಿಯ ಮುಖಂಡರೆ ಪತ್ರ ಬರೆಯುವ ಕೆಲಸ ಮಾಡಿದ್ದಾರೆ. ಒಡೆದ ಕನ್ನಡಿಯನ್ನು ಮತ್ತೆ ಸೇರಿಸೋಕೆ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವವಿಲ್ಲ, ಸಿದ್ಧಾಂತ, ಸಂಘಟನೆಗೆ ಕಾರ್ಯಕರ್ತರ ಗುಂಪು ಇಲ್ಲ. ಸೋನಿಯಾ ಗಾಂಧಿ ಅವರನ್ನೇ ತಾತ್ಕಾಲಿಕವಾಗಿ ಆರು ತಿಂಗಳು ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






