ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020
ಸರ್ಕಾರ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿ.ಕೆ.ಶಿವಕುಮಾರ್ ಅವರ ಫೋನ್ ಟ್ಯಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾ. ಅವರು ಏನು ಕಡಿದು ಗುಡ್ಡೆ ಹಾಕಿದ್ದಾರೆ ಎಂದು ಅವರ ಫೋನ್ ಟ್ಯಾಪ್ ಮಾಡಬೇಕಿದೆ. ಇದೆಲ್ಲ ಪ್ರಚಾರ ತಂತ್ರ. ಈ ಮೂಲಕ ದೊಡ್ಡವರಾಗೋಕೆ ಪ್ರಯತ್ನಿಸುತ್ತಿದ್ದಾರೆ. ಅವರ ಫೋನ್ ಟ್ಯಾಪ್ ಆಗುತ್ತಿಲ್ಲ. ಅವರದ್ದು ಅರ್ಥವಿಲ್ಲದ ಹೇಳಿಕೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು.
ಒಡೆದ ಕನ್ನಡಿ ಮತ್ತೆ ಸೇರೋಕೆ ಆಗಲ್ಲ
ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಂತೆ ಆಗಿದೆ. ಪಕ್ಷದ ನಾಯಕರ ವಿರುದ್ಧ ಹಿರಿಯ ಮುಖಂಡರೆ ಪತ್ರ ಬರೆಯುವ ಕೆಲಸ ಮಾಡಿದ್ದಾರೆ. ಒಡೆದ ಕನ್ನಡಿಯನ್ನು ಮತ್ತೆ ಸೇರಿಸೋಕೆ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವವಿಲ್ಲ, ಸಿದ್ಧಾಂತ, ಸಂಘಟನೆಗೆ ಕಾರ್ಯಕರ್ತರ ಗುಂಪು ಇಲ್ಲ. ಸೋನಿಯಾ ಗಾಂಧಿ ಅವರನ್ನೇ ತಾತ್ಕಾಲಿಕವಾಗಿ ಆರು ತಿಂಗಳು ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]