ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ವಿವಿಧ ಯೋಜನೆಗಳಿಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನೀಡಿರುವ ಜಾಗವನ್ನು ಸರ್ಕಾರ ಹಿಂಪಡೆಯಬೇಕು. ಈ ಭಾಗವನ್ನು ಜೈವಿಕ ವೈವಿಧ್ಯತೆಯ ತಾಣವಾಗಿಸಬೇಕು ಅಂತಾ ಮನವಿ ಮಾಡಿದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಾಗಿಗುಡ್ಡದ ವಿವಿಧ ಕಡೆ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.
ನಾಲ್ಕು ವರ್ಷದಿಂದ ರಾಗಿಗುಡ್ಡದಲ್ಲಿ ನೂರಾರು ಗಿಡಗಳನ್ನು ನೆಟ್ಟು, ಹಸಿರೀಕರಣ ಮಾಡಲಾಗುತ್ತಿದೆ. ಈ ಮಧ್ಯೆ ವಿವಿಧ ಯೋಜನೆಗಳಿಗೆ ಜಾಗ ನೀಡಲಾಗಿದೆ. ಯೋಜನೆಗಳಿಗೆ ಪರ್ಯಾಯ ಜಾಗ ಸೂಚಿಸಬೇಕು ಎಂದು ಪರಿಸರ ಆಸಕ್ತರು ಮನವಿ ಮಾಡಿದರು.
https://www.facebook.com/liveshivamogga/videos/241760936781312/?t=4
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ನವ್ಯಶ್ರೀ ನಾಗೇಶ್, ಶಿವಮೊಗ್ಗ ನಂದನ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ, ಶೇಖರ್ ಗೌಳೇರ್, ಅಶೋಕ್ ಕುಮಾರ್ ಸೇರಿದಂತೆ ಹಲವು ಪರಿಸರ ಆಸಕ್ತರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200