ಶಿವಮೊಗ್ಗದ ರಾಗಿಗುಡ್ಡದಲ್ಲಿ ಸಚಿವ ಈಶ್ವರಪ್ಪ ಪರಿಶೀಲನೆ, ಜೀವ ವೈವಿಧ್ಯ ತಾಣವಾಗಿ ಉಳಿಸಿವಂತೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020

ವಿವಿಧ ಯೋಜನೆಗಳಿಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನೀಡಿರುವ ಜಾಗವನ್ನು ಸರ್ಕಾರ ಹಿಂಪಡೆಯಬೇಕು. ಈ ಭಾಗವನ್ನು ಜೈವಿಕ ವೈವಿಧ್ಯತೆಯ ತಾಣವಾಗಿಸಬೇಕು ಅಂತಾ ಮನವಿ ಮಾಡಿದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ರಾಗಿಗುಡ್ಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಾಗಿಗುಡ್ಡದ ವಿವಿಧ ಕಡೆ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ‍್ವರಪ್ಪ, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.

ನಾಲ್ಕು ವರ್ಷದಿಂದ ರಾಗಿಗುಡ್ಡದಲ್ಲಿ ನೂರಾರು ಗಿಡಗಳನ್ನು ನೆಟ್ಟು, ಹಸಿರೀಕರಣ ಮಾಡಲಾಗುತ್ತಿದೆ. ಈ ಮಧ್ಯೆ ವಿವಿಧ ಯೋಜನೆಗಳಿಗೆ ಜಾಗ ನೀಡಲಾಗಿದೆ. ಯೋಜನೆಗಳಿಗೆ ಪರ್ಯಾಯ ಜಾಗ ಸೂಚಿಸಬೇಕು ಎಂದು ಪರಿಸರ ಆಸಕ್ತರು ಮನವಿ ಮಾಡಿದರು.

https://www.facebook.com/liveshivamogga/videos/241760936781312/?t=4

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‍ ಸೇರಿದಂತೆ ಹಲವು ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ನವ್ಯಶ್ರೀ ನಾಗೇಶ್, ಶಿವಮೊಗ್ಗ ನಂದನ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ, ಶೇಖರ್ ಗೌಳೇರ್, ಅಶೋಕ್ ಕುಮಾರ್ ಸೇರಿದಂತೆ ಹಲವು ಪರಿಸರ ಆಸಕ್ತರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment