ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಮಿಲಿಟರಿ ಕ್ಯಾಂಟೀನ್ನಲ್ಲಿ ಸಮರ್ಪಕವಾಗಿ ಸೇವೆ ನೀಡುತ್ತಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ವಿದ್ಯಾನಗರದಲ್ಲಿರುವ ಮಿಲಿಟರಿ ಕ್ಯಾಂಟೀನ್ ಮುಂದೆ ಇವತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಳೆ ಬಸ್ ನಿಲ್ದಾಣ ಬಳಿ ಇರುವ ಮಿಲಿಟರಿ ಕ್ಯಾಂಟೀನ್ನಲ್ಲಿ ದಿನಸಿ ಮತ್ತು ಮದ್ಯ ಪೂರೈಕೆ ಸಮರ್ಪಕವಾಗಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ಲಾಕ್ ಡೌನ್ ಇದ್ದ ಕಾರಣ ಎರಡು ತಿಂಗಳು ಯಾವುದ ದಿನಸಿ ಮತ್ತು ಮದ್ಯ ವಿತರಣೆ ಮಾಡಿಲ್ಲ. ಈಗಲೂ ಇವುಗಳನ್ನು ಒದಗಿಸಲು ಮೀನಮೇಷ ಎಣಿಸಲಾಗುತ್ತಿದೆ ಎಂದು ಮಾಜಿ ಸೈನಿಕರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 600 ಮಂದಿ ಸಿಎಂಡಿ ಕಾರ್ಡ್ ಹೊಂದಿರುವ ಮಾಜಿ ಸೈನಿಕರಿದ್ದಾರೆ. ಇವತ್ತು ಸುಮಾರು 50ಕ್ಕೂ ಹೆಚ್ಚು ಮಾಜಿ ಸೈನಿಕರು ಕ್ಯಾಂಟೀಗೆ ಬಂದಾಗ ಆಡಳಿತ ಸಿಬ್ಬಂದಿಗಳ ಜೊತೆಗೆ ಮಾತಿನ ಚಕಮಕಿಯಾಗಿದೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






