SHIMOGA, 27 JULY 2024 : ತುಂಗಾ ಜಲಾಶಯದಿಂದ (Dam) ಅಪಾರ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಗಾಜನೂರಿನ ತುಂಗಾ ಜಲಾಶಯದಿಂದ ಪ್ರಸ್ತುತ 84,003 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನದಿ ದಂಡೆ ಪಕ್ಕದ ಪ್ರದೇಶಗಳಿಗೆ ನೀರು ನುಗ್ಗಿದೆ.
ರಸ್ತೆ ಮೇಲೆ ಹರಿದ ತುಂಗೆ
ನ್ಯೂ ಮಂಡ್ಲಿ ಬಳಿ ತುಂಗಾ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಅಕ್ಕಪಕ್ಕದ ಜಮೀನು, ದೇವಸ್ಥಾನ ಜಲಾವೃತವಾಗಿದೆ. ರಸ್ತೆ ಮೇಲೆ ನೀರು ನಿಂತಿರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.
ಜನರಲ್ಲಿ ನೆರೆ ಭೀತಿ
ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದಂತೆ ನದಿ ದಂಡೆ ಮೇಲಿನ ಮನೆಗಳು, ಕಟ್ಟಡಗಳ ನಿವಾಸಿಗಳಲ್ಲಿ ಭೀತಿ ಉಂಟಾಗಿದೆ. ಹೊಸಹಳ್ಳಿ, ಸವಾಯಿಪಾಳ್ಯ, ಮದಾರಿಪಾಳ್ಯ, ನ್ಯೂ ಮಂಡ್ಲಿ, ಸೀಗೆಹಟ್ಟಿ ಭಾಗದಲ್ಲಿ ನೀರು ನುಗ್ಗುವ ಭಯ ಆವರಿಸಿದೆ. ಮದಾರಿ ಪಾಳ್ಯದಲ್ಲಿ ಮಸೀದಿಯ ಹಿಂಭಾಗದಲ್ಲಿ ಈಗಾಗಲೇ ಶೌಚಾಲಯ ಕೊಚ್ಚಿ ಹೋಗಿದ್ದು ಮತ್ತಷ್ಟು ಮಣ್ಣು ಕುಸಿಯುವ ಆತಂಕವಿದೆ.
ಇದನ್ನೂ ಓದಿ ⇓
ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭರ್ತಿಯ ಸನಿಹಕ್ಕೆ ಭದ್ರಾ, ಲಿಂಗನಮಕ್ಕಿ, ಎಷ್ಟಿದೆ ಒಳ ಹರಿವು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200