ಶಿವಮೊಗ್ಗದಲ್ಲಿ ಬ್ಯಾಂಕಿಗೆ ಲಕ್ಷ ಲಕ್ಷ ರೂ. ವಂಚನೆ | ಟ್ರಾಕ್ಟರ್ ಡಿಕ್ಕಿ, ವ್ಯಕ್ತಿ ಸಾವು – 3 CRIME NEWS

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 DECEMBER 2022

ನಕಲಿ ದಾಖಲೆ ನೀಡಿ ಬ್ಯಾಂಕಿನಿಂದ ಲಕ್ಷ ಲಕ್ಷ ಸಾಲ

ಶಿವಮೊಗ್ಗ : ನಕಲಿ ದಾಖಲೆಗಳನ್ನು (fake documents) ಒದಗಿಸಿ ಕೆನರಾ ಬ್ಯಾಂಕಿನಿಂದ ಲಕ್ಷ ಲಕ್ಷ ರೂ. ಸಾಲ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಬ್ಯಾಂಕಿನ ಶೇಷಾದ್ರಿಪುರಂ ಬ್ರಾಂಚ್ ಮ್ಯಾನೇಜರ್ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಗೋಪಾಳದಲ್ಲಿ ನಿವೇಶನ ಖರೀದಿಸಿ, ಮನೆ ಕಟ್ಟುವ ಸಲುವಾಗಿ 16 ಲಕ್ಷ ರು. ಸಾಲ ಪಡೆಯಲಾಗಿದೆ. ಇದಕ್ಕಾಗಿ ಆರೋಪಿಗಳು ನಕಲಿ ದಾಖಲೆಗಳನ್ನು ಒದಗಿಸಿದ್ದಾರೆ. ಈಗ ಸಾಲದ ಹಣವನ್ನು ಬ್ಯಾಂಕಿಗೆ ಕಟ್ಟಿಲ್ಲ ಎಂದು ಬ್ಯಾಂಕ್ ವ್ಯವಸ್ಥಾಪಕರು ಆರೋಪಿಸಿ ದೂರು ನೀಡಿದ್ದಾರೆ. ಶಿವಕುಮಾರ್ ಮತ್ತು ಪುಷ್ಪಾ ಎಂಬುವವರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(fake documents)

ಮದ್ಯಪಾನಕ್ಕೆ ಅವಕಾಶ, ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಕೇಸ್

ಭದ್ರಾವತಿ : ರಸ್ತೆಯಲ್ಲಿ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿದ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಭದ್ರಾವತಿ ತಾಲೂಕು ಕಲ್ಲಹಳ್ಳಿಯ ಹಳ್ಳೀಕೆಟ್ಟೆ ಬಳಿ ರಸ್ತೆಯಲ್ಲಿ ಮದ್ಯಪಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದು ಆರೋಪಿಸಲಾಗಿದೆ. ವರದರಾಜ ಎಂಬುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

(fake documents)

ಟ್ರಾಕ್ಟರ್ ಡಿಕ್ಕಿ, ನಡೆದು ಹೋಗುತ್ತಿದ್ದ ವ್ಯಕ್ತಿ ಸಾವು

ಭದ್ರಾವತಿ : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಟ್ರಾಕ್ಟರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಸಯ್ಯದ್ ದಸ್ತಗೀರ್ (45) ಮೃತ ದುರ್ದೈವಿ. ಕೂಲಿ ಕೆಲಸಕ್ಕೆ ತೆರಳಲು ಸಯ್ಯದ್ ದಸ್ತಗೀರ್ ಅವರು ಜಟ್ ಪಟ್ ನಗರದ ಕೆರೆ ಏರಿ ಮೇಲೆ ನಡೆದು ಹೋಗುತ್ತಿದ್ದರು. ಆಗ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಟ್ರಾಕ್ಟರ್ ಚಾಲಕ ಟ್ರಾಕ್ಟರ್ ನಿಲ್ಲಿಸದೆ ಪರಾರಿಯಾಗಿದ್ದಾನೆ. ಸಯ್ಯದ್ ದಸ್ತಗೀರ್ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೆ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಹೊತ್ತಿಗಾಗಲೆ ಸಯ್ಯದ್ ದಸ್ತಗೀರ್ ಕೊನೆಯುಸಿರೆಳೆದಿದ್ದರು. ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ALSO READ – ಆಸ್ಪತ್ರೆ ಟಾಯ್ಲೆಟ್‌ನಿಂದ ಹೊರಬಂದು ಕೈದಿಯ ರಂಪಾಟ, ಚೆಕ್ ಮಾಡುವಾಗ ಕೆಳಗೆ ಬಿತ್ತು ಪೊಟ್ಟಣ, FIR ದಾಖಲು

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment