SHIVAMOGGA LIVE NEWS | 21 APRIL 2023
SHIMOGA : ದ್ವಿತೀಯ ಪಿಯುಸಿ ಫಲಿತಾಂಶ (Second PUC) ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ.
ರೈತನ ಮಗಳು ರಾಜ್ಯಕ್ಕೆ ಸಕೆಂಡ್ ರ್ಯಾಂಕ್
ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ್ಯಾಂಕ್ (Second PUC) ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ.
ಅನ್ವಿತಾ.ಡಿ.ಎನ್ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ. ಮಗಳು ರ್ಯಾಂಕ್ ಪಡೆದ ವಿಚಾರ ತಿಳಿದು ಖುಷಿಯಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅನ್ವಿತಾ.ಡಿ.ಎನ್ ಅವರು, ʼಕಾಲೇಜಿನ ಉಪನ್ಯಾಸಕರು ಸಪೋರ್ಟಿವ್ ಆಗಿದ್ದರು. ಯಾವುದೆ ಸಂದೇಹಗಳಿದ್ದರು ಕೇಳಿದಾಗಲೆ ಅದನ್ನು ಬಗೆಹರಿಸುತ್ತಿದ್ದರು. ಇನ್ನು, ಆಯಾ ದಿನದ ಪಾಠಗಳನ್ನು ಅಂದೇ ವರ್ಕ್ ಮಾಡುತ್ತಿದ್ದೆ. ಊರಿನಿಂದ ಓಡಾಡುವುದು ಕಷ್ಟ. ಹಾಗಾಗಿ ವಿಕಾಸ ಕಾಲೇಜಿನ ಹಾಸ್ಟೆಲ್ನಲ್ಲಿದ್ದೆ. ಅಲ್ಲಿಯುವ ಓದುವ ವಾತಾವರಣ ಇದೆ. ಹಾಗಾಗಿ ಓದಲು ತುಂಬಾ ಅನುಕೂಲವಾಯಿತು. ಹೆಚ್ಚು ಅಂಕ ಪಡೆದ ವಿಚಾರ ತಿಳಿದು ಅಪ್ಪ, ಅಮ್ಮ ತುಂಬಾ ಖುಷಿಯಾಗಿದ್ದಾರೆ. ಮುಂದೆ ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಯೋಚನೆ ಇದೆ.ʼ ಎಂದು ತಿಳಿಸಿದರು.
ಶಿವಮೊಗ್ಗದ ವಿದ್ಯಾರ್ಥಿನಿಗೆ ಮೂರನೇ ಸ್ಥಾನ
ಶಿವಮೊಗ್ಗದ ಕುವೆಂಪು ನಗರದ ಎಸ್.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನ ನೇಹಶ್ರೀ ಅವರು 600 ಅಂಕಗಳಿಗೆ 595 ಅಂಕ ಗಳಿಸಿದ್ದಾರೆ. ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 13 ವಿದ್ಯಾರ್ಥಿಗಳು ಈ 595 ಅಂಕ ಗಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಸ್.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ಸಿಬ್ಬಂದಿ ನೇಹಶ್ರೀ ಅವರಿಗೆ ಅಭಿನಂದನೆ ಸಲ್ಲಿಸಿದರು.
ನೇಹಶ್ರೀ ಅವರ ತಂದೆ ಜಯಂತ್ ಕುಮಾರ್ ಅವರು ಬಿ.ಆರ್.ಪಿಯ ರಾಷ್ಟ್ರೀಯ ಪಿಯು ಕಾಲೇಜಿನ ಎಸ್.ಡಿ.ಎ ಆಗಿದ್ದಾರೆ. ತಾಯಿ ಚಂದನಾ.ಎಸ್.ಬಿ.
ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಚುನಾವಣಾ ಚೆಕ್ಪೋಸ್ಟ್ಗಳು ಪಲ್ಟಿ, ಸಿಸಿಟಿವಿಗಳು ಹಾನಿ
ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ನೇಹಶ್ರೀ ಅವರ ತಂದೆ ಜಯಂತ್ ಕುಮಾರ್ ಅವರು, ʼನೇಹಶ್ರೀ ಅವರು ಯಾವುದೆ ಒತ್ತಡವಿಲ್ಲದೆ ನಿತ್ಯ ಓದುತ್ತಿದ್ದಳು. ಅವರ ಶಿಕ್ಷಕರಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ. ಮುಂದೆ ಸಿಎ ಓದಬೇಕು ಅಂದುಕೊಂಡಿದ್ದಾಳೆʼ ಎಂದು ತಿಳಿಸಿದರು.
ಶಿವಮೊಗ್ಗಕ್ಕೆ 8ನೇ ಸ್ಥಾನ
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಶೇ.83.13ರಷ್ಟು ಫಲಿಶಾಂತ ಬಂದಿದೆ. ಕಳೆದ ಬಾರಿ ಶೇ.70.14ರಷ್ಟು ಫಲಿತಾಂಶದೊಂದಿಗೆ ಎಂಟನೆ ಸ್ಥಾನದಲ್ಲಿಯೇ ಇತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200