SHIVAMOGGA LIVE NEWS | 4 SEPTEMBER 2023
ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ
SHIMOGA : ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದೆ. ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ. ಎಸ್.ಎನ್.ಜಿ.ವಿ ರಾಜ್ಯಾಧ್ಯಕ್ಷ ಸತ್ಯ ಜಿತ್ ಸೂರತ್ಕಲ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಗೌರವ ಅಧ್ಯಕ್ಷರಾಗಿ ಗೀತಾಂಜಲಿ ದತ್ತಾತ್ರೇಯ, ಜಯಂತಿ ಕೃಷ್ಣಮೂರ್ತಿ, ಸುಮತಿ ಆರ್. ಪೂಜಾರಿ, ಉಪಾಧ್ಯಕ್ಷರಾಗಿ ಗೀತಾ ರಾಘವೇಂದ್ರ, ಸೀತಮ್ಮ ರಾಜಪ್ಪ, ಸುಮಿತ್ರಾ, ಮೋಹನ್, ಸಂಘಟನಾ ಕಾರ್ಯದರ್ಶಿಗಳಾಗಿ ಶೃತಿ ರವಿ, ಕಸ್ತೂರಿ ಸಾಗರ, ಶಾಲಿನಿ, ನಾಗರಾಜ್, ಶ್ವೇತಾ ಬಂಡಿ, ಅಶ್ವಿನಿ ಸತೀಶ್, ಚೈತ್ರಾ ಪ್ರದೀಪ್, ನಿರ್ಮಲ ನವೀನ್, ಪ್ರಿಯಾಂಕ ಪ್ರವೀಣ್ ಹಿರೇ ಇಡಗೋಡು, ನೇಮಕವಾಗಿದ್ದಾರೆ.
ಇದನ್ನೂ ಓದಿ – ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?
ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ
THIRTHAHALLI : ಕೋಳಿ ಅಂಕದ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿ ಕೋಳಿಗಳು, ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ದಾಳಿ ನಡೆಸಿದ ವೇಳೆ ಅಂಕದಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೋಣಂದೂರು ಸಮೀಪದ ಕಟ್ಟೆಗದ್ದೆಯಲ್ಲಿ ಭಾನುವಾರ ಕೋಳಿ ಅಂಕ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ಇ-ಬಸ್ ಟಿಕೆಟ್ ರೇಟ್ ಕಡಿತ, ವೀಕೆಂಡ್ಗೆ ಪ್ರತ್ಯೇಕ ದರ ಫಿಕ್ಸ್
ಮಳೆಗಾಗಿ ಹಣಗೆರೆಯಲ್ಲಿ ವಿಶೇಷ ಪೂಜೆ
THIRTHAHALLI : ಮಳೆ (rain) ಕೈಕೊಟ್ಟಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಮಳೆಗಾಗಿ ಪ್ರಾರ್ಥಿಸಿ ತೀರ್ಥಹಳ್ಳಿ ತಾಲೂಕಿನ ಹಣಗೆರೆಯ ಶ್ರೀ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಶ್ರೀ ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಹಣಗೆರೆ – ಕರೆಹಳ್ಳಿ ಗ್ರಾಮಸ್ಥರು ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200