SHIVAMOGGA LIVE NEWS | 2 NOVEMBER 2022
SHIMOGA | ರೈತರಿಗೆ ಮಾರಕವಾಗಲಿರುವ ಜಾಗತಿಕ ಬಂಡವಾಳ (global investors meet) ಹೂಡಿಕೆದಾರರ ಸಮಾವೇಶ ಕೈಬಿಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಉದ್ಯೋಗ ಸೃಷ್ಟಿಯ ನೆಪದಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಹಾಗೂ ಶ್ರೀಮಂತರಿಗೆ ಧಾರೆ ಎರೆಯಲು ಹೊರಟಿದೆ. ಇದಕ್ಕಾಗಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (global investors meet) ನಡೆಸುತ್ತಿದೆ. ಇದನ್ನು ಈ ಕೂಡಲೆ ಕೈಬಿಡಬೇಕು. ರೈತರ ಫಲವತ್ತಾದ ಜಮೀನು ಮಾತ್ರವಲ್ಲದೆ ನೀರು, ವಿದ್ಯುತ್ ಅನ್ನು ಕೂಡ ಬಂಡವಾಳ ಹೂಡಿಕೆದಾರರಿಗೆ ನೀಡಲಾಗುತ್ತಿದೆ ಎಂದು ದೂರಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ನ.2 ರಿಂದ 4 ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಹಿಂದೆಯೂ ಇಂತಹ ಸಮಾವೇಶಗಳು ನಡೆದಿದ್ದವು. ಚುನಾವಣೆಗಳು ಹತ್ತಿರವಿರುವ ಸಂದರ್ಭ ಇಂತಹ ಸಮಾವೇಶ (global investors meet) ನಡೆಯುತ್ತವೆ. ಜನರಲ್ಲಿ ಭ್ರಮೆ ಹುಟ್ಟಿಸುವ ಉದ್ದೇಶದಿಂದ ಸುಳ್ಳು ಪ್ರಚಾರ ಪಡೆಯಲಾಗುತ್ತದೆ. ನಮ್ಮ ರಾಜ್ಯದ ಯುವಕ, ಯುವತಿಯರಿಗೆ ಇದರಿಂದ ಯಾವ ಉದ್ಯೋಗವೂ ಸಿಗುವುದಿಲ್ಲ ಎಂದು ಆರೋಪಿಸಿದರು.
ಸಮಾವೇಶದ ಹಿಂದೆ ರೈತರಿಂದ ಭೂಮಿ ಕಿತ್ತುಕೊಳ್ಳುವ ಹುನ್ನಾರ ಇದೆ. ಈಗಾಗಲೇ ಸರ್ಕಾರದ ಕೈಗಾರಿಕಾ ಸಚಿವರು, ಉನ್ನತ ಅಧಿಕಾರಿಗಳು ದೇಶ ವಿದೇಶಗಳನ್ನು ಸುತ್ತಿ ನಮ್ಮ ಹತ್ತಿರ ಸಾಕಷ್ಟು ಭೂಮಿ ಇದೆ. ಅದನ್ನು ನಿಮಗೆ ನೀಡುತ್ತೇವೆ ಎಂದು ಕಾರ್ಪೊರೇಟ್ ಕಂಪನಿಗಳ ಮುಂದೆ ಕೈಕಟ್ಟಿ ನಿಂತಿದ್ದಾರೆ. ಹೂಡಿಕೆಗಾಗಿ ಒಂದು ರೀತಿಯ ಸ್ಪರ್ಧೆಯೇ ಏರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗೆ ಸಹಾಯವಾಣಿ, ಸಿಗಲಿದೆ 4 ರೀತಿಯ ನೆರವು
ಕಳೆದ 10 ವರ್ಷಗಳಲ್ಲಿ ಎಷ್ಟು ಉದ್ಯಮಗಳು ಬಂದಿವೆ. ಎಷ್ಟು ಭೂಮಿಯನ್ನು ಸರ್ಕಾರ ಅವರಿಗೆ ನೀಡಿದೆ. ಎಷ್ಟು ಜನರಿಗೆ ಉದ್ಯೋಗ ನೀಡಲಾಗಿದೆ. ಯಾವ ಉದ್ಯಮಗಳು ಆರಂಭವಾಗಿವೆ ಎಂಬ ಅಂಕಿ ಅಂಶಗಳ ಶ್ವೇತ ಪ್ರತವನ್ನು ರಾಜ್ಯ ಸರ್ಕಾರ ಕೂಡಲೇ ಪ್ರಕಟಿಸಲಿ. ಈ ಬಗ್ಗೆ ಜನಾಭಿಪ್ರಾಯ ಮೂಡಿಸಲಿ. ಪಾರದರ್ಶಕತೆ ಇರಲಿ. ಅಲ್ಲಿಯವರೆಗೂ ಇಂತಹ ಸಮಾವೇಶಗಳು ನಡೆಯಕೂಡದು ಎಂದು ಅವರು ಆಗ್ರಹಿಸಿದರು.
ಇದರ ಜೊತೆಗೆ ಕೇಂದ್ರ ಸರ್ಕಾರ ಕುಲಾಂತರಿ ಸಾಸಿವೆಗೆ ಅನುಮತಿ ನೀಡಿದೆ. ಇದರಿಂದ ಕೃಷಿ, ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಈ ಕುಲಾಂತರಿ ಸಾಸಿವೆಗೆ ನೀಡಿರುವ ಅನುಮತಿ ರಾಜ್ಯದಲ್ಲಿ ಜಾರಿಗೆ ತರಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಪದಾಧಿಕಾರಿಗಳಾದ ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಈಶಣ್ಣ, ಎಸ್. ಶಿವಮೂರ್ತಿ, ಜಿ.ಎನ್. ಪಂಚಾಕ್ಷರಿ, ಸಿ. ಚಂದ್ರಪ್ಪ, ಪಿ.ಡಿ. ಮಂಜಪ್ಪ, ಕೆ. ರಾಘವೇಂದ್ರ, ಇ.ಬಿ. ಜಗದೀಶ್ ಮುಂತಾದವರಿದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.