SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ಆದ್ದರಿಂದ ಸಭೆಗಳು ಮುಕ್ತವಾಗಿರಬೇಕು, ರೈತರ ಅಭಿಪ್ರಾಯಗಳನ್ನು ಒಳಗೊಳ್ಳಬೇಕು ಎಂದು ಅಗ್ರಹಿಸಿದರು.
ಯಶವಂತರಾವ್ ಘೋರ್ಪಡೆ, ಹೆಚ್.ಎಸ್. ಮಂಜುನಾಥೇಶ್ವರ, ಜಗದೀಶ್ ನಾಯ್ಕ್, ಹಾಲೇಶಪ್ಪ ಗೌಡ್ರು, ಈರಣ್ಣ ಪ್ಯಾಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್ ಟರ್ಮಿನಲ್ಗೆ ಮಿನಿಸ್ಟರ್ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200