ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019
ರೈತ ವಿರೋಧಿ ಆಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
RCEP ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ಹೈನುಗಾರಿಕೆ, ಆಹಾರ ಮತ್ತು ಕೃಷಿಯ ಕ್ಷೇತ್ರಕ್ಕೆ ದೊಡ್ಡ ಆತಂಕ ಎದುರಾಗುತ್ತದೆ. ರೈತ ವಿರೋಧಿ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಪ್ರಮುಖರಾದ ಕಡಿದಾಳು ಶಾಮಣ್ಣ, ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಡಾ.ಬಿ.ಎಂ.ಚಿಕ್ಕಸ್ವಾಮಿ, ಎನ್.ಕೆ.ಮಂಜುನಾಥಗೌಡ, ಕೆ.ರಾಘವೇಂದ್ರ, ಇ.ಬಿ.ಜಗದೀಶ್, ಶಿವಮೂರ್ತಿ, ಮಂಜಪ್ಪ, ರಾಮಚಂದ್ರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200