ನ.26ರಂದು ಜಿಲ್ಲಾಧಿಕಾರಿ ಕಚೇರಿ ಎದುರು ರ‍್ಯಾಲಿ, ಕಾರಣವೇನು?

SHIMOGA NEWS, 20 NOVEMBER 2024 : 25 ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ನ.26 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ರ‍್ಯಾಲಿ (Rally) ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.  ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಆರ್‌.ಬಸವರಾಜಪ್ಪ, ಮಹಾದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆ, ಕಾರ್ಮಿಕರ ಸಮಸ್ಯೆ ಬಗೆಹರಿಸುತ್ತಿಲ್ಲ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇದಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರ‍್ಯಾಲಿ ನಡೆಸಲಾಗುತ್ತಿದೆ ಎಂದರು.

HR-Basavarajappa-Raitha-Sanga-President.webp

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಸರ್ಕಾರಗಳು ಕೊಟ್ಟ ಮಾತಿಗೆ ತಪ್ಪಿ ನಡೆಯುತ್ತಿವೆ. ಚುನಾವಣೆ ಮತ್ತು ರೈತರ ಹೋರಾಟದ ಸಂದರ್ಭ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿಲ್ಲ.

ಹೆಚ್‌.ಆರ್‌.ಬಸವರಾಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ

HR-Basavarajappa-Raitha-Sanga-President.webp

RED-LINE-

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಕೆ.ರಾಘವೇಂದ್ರ, ಕೆ. ರುದ್ರೇಶ್, ಎನ್.ಡಿ. ನಾಗರಾಜ್, ಚಂದ್ರಪ್ಪ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ » ಮೂರು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment